Categories: ಮೈಸೂರು

ಹೊತ್ತಿ ಉರಿದ ಶಾಲಾ ಬಸ್: ತಪ್ಪಿದ ಭಾರೀ ಅನಾಹುತ

ಮೈಸೂರು : ತಾಂತ್ರಿಕ ತೊಂದರೆಯಿಂದಾಗಿ ಶಾಲಾ ಬಸ್‍ವೊಂದು ಹೊತ್ತು ಉರಿದ ಘಟನೆ ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರದಲ್ಲಿ ನಡೆದಿದ್ದು ಭಾರೀ ದುರಂತವೊಂದು ತಪ್ಪಿದಂತಾಗಿದೆ.

ಖಾಸಗಿ ಶಾಲೆಗೆ ಸೇರಿದ ಬಸ್ ಇದಾಗಿದ್ದು, ಬೆಳಿಗ್ಗೆ ಮಕ್ಕಳನ್ನು ಮನೆಯಿಂದ ಶಾಲೆಗೆ ಕರೆದೊಯ್ದ ಬಳಿಕ ಶಾಲಾ ಆವರಣದಲ್ಲಿ ಸುಮಾರು ಐದು ಬಸ್ ಗಳನ್ನು ನಿಲ್ಲಿಸಲಾಗಿತ್ತು. ಹೀಗೆ ನಿಂತಿದ್ದ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬಸ್‍ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಟ್ಟವಾದ ಹೊಗೆ ಹೊರಬಂದಿದೆ. ತಕ್ಷಣ ಸ್ಥಳದಲ್ಲಿದ್ದವರು ನೀರನ್ನು ಹಾಕಿ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಇತರೆ ಬಸ್ ಗಳಿಗೆ ಹರಡದೆ ಭಾರೀ ಅನಾಹುತವನ್ನು ತಪ್ಪಿಸಲಾಗಿದೆ.

ಮೇಲ್ನೋಟಕ್ಕೆ ತಾಂತ್ರಿಕ ಕಾರಣದಿಂದ ಬೆಂಕಿ ತಗುಲಿದೆ ಎಂದು ಹೇಳಲಾಗುತ್ತಿದ್ದರೂ ಪೊಲೀಸರ ತನಿಖೆ ಬಳಿಕ ನಿಜ ವಿಷಯ ಗೊತ್ತಾಗಬೇಕಾಗಿದೆ. ಶಾಲಾ ಮಕ್ಕಳನ್ನು ಕೆಳಗಿಳಿಸಿ ಚಾಲಕ ಶಾಲೆಯೊಳಗೆ ಹೋದ ಕೆಲವೇ ಕ್ಷಣದಲ್ಲಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಇದನ್ನು ನೋಡಿದ ಸುತ್ತ ಮುತ್ತಲ ಜನರು ಶಾಲಾ ಸಿಬ್ಬಂದಿ ಹೊತ್ತಿ ಉರಿಯುತ್ತಿದ್ದ ಬೆಂಕಿಗೆ ನೀರು ಹಾಕಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದು ಅದೇ ವೇಳೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯಿಂದ ಶಾಲೆಗೆ ಮಕ್ಕಳನ್ನು ಬಸ್ ನಲ್ಲಿ ಕಳುಹಿಸುವ ಪೋಷಕರು ಆತಂಕಗೊಂಡಿದ್ದಾರೆ.

Gayathri SG

Recent Posts

ವಿವಾದಾತ್ಮಕ ಹೇಳಿಕೆ : ಶಾಸಕ ರಾಜು ಕಾಗೆಗೆ ಚುನಾವಣಾ ಇಲಾಖೆ ನೋಟಿಸ್‌

ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ‌…

6 hours ago

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

7 hours ago

ಕೊಳೆತ ಸ್ಥತಿಯಲ್ಲಿ ಮಹಿಳೆ ಮೃತ ದೇಹ ಪತ್ತೆ

ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಮೃತದೇಹ ಗುರುತು ಪತ್ತೆಯಾಗದಂತೆ ಬೆಂಕಿ ಹಚ್ಚಿ ಅರಣ್ಯದಲ್ಲಿ ಹಾಕಿ ಹೋಗಿರುವ ಪ್ರಕರಣ ತಾಲ್ಲೂಕಿನ ತೂಬಗೆರೆ…

7 hours ago

ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅಮೀತ್ ಶಾಗೆ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪರವಾಗಿ ಪ್ರಚಾರಕ್ಕೆ ಬಂದ ಕೇಂದ್ರ ಗೃಹ ಮಂತ್ರಿ ಅಮೀತ್ ಶಾ ಅವರು ವಿಜಯ…

8 hours ago

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ…

8 hours ago

ಕಾಂಗ್ರೆಸ್ ಶಾಸಕನದ್ದು ಎನ್ನಲಾದ ಮತ್ತೊಂದು ಅಶ್ಲೀಲವಿಡಿಯೋ ವೈರಲ್‌

ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊರ್ವ ಶಾಸಕನ ವಿಡಿಯೋ ವೈರಲ್‌ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಶಾಸಕರದ್ದು ಎನ್ನಲಾದ…

9 hours ago