Categories: ಮೈಸೂರು

ಮೈಸೂರಿನ ಧ್ವಜ ಸಮಿತಿಯಿಂದ ಪ್ರಧಾನಿಗೆ ಹತ್ತು ಪ್ರಶ್ನೆಗಳು

ಮೈಸೂರು: ರಾಷ್ಟ್ರಧ್ವಜದ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಗೋಕುಲಂನ ಧ್ವಜ ಸತ್ಯಾಗೃಹ ಸಮಿತಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತಂತೆ ಸಮಿತಿಯ ಸಂಚಾಲಕ ಕಾಳಚನ್ನೇಗೌಡ ಅವರು ಪ್ರಧಾನಿಗೆ ಹತ್ತು ಪ್ರಶ್ನೆಗಳನ್ನು ಕೇಳಿದ್ದಾರೆ.

1.ರಾಷ್ಟ್ರಧ್ವಜದಿಂದ ಖಾದಿಯನ್ನೇಕೆ ಕಿತ್ತು ಹಾಕಿದಿರಿ? 2.ಸರಕಾರಿ ಕಛೇರಿಗಳ ಮೂಲಕ, ಬ್ಯಾಂಕು, ಮುನಿಸಿಪಾಲಿಟಿ ಅಥವಾ ಇತರೆ ಸ್ವಾಯತ್ತ ಸಂಸ್ಥೆಗಳ ಮೂಲಕ, ವಿದೇಶಿವಸ್ತ್ರ ಹಾಗೂ ಸಿಂಥೆಟಿಕ್ ವಸ್ತ್ರದಿಂದ ತಯಾರಾದ ಧ್ವಜಗಳನ್ನೇಕೆ ಬಲವಂತದಿಂದ ಮಾರಾಟ ಮಾಡಿಸುತ್ತಿದ್ದೀರಿ?

3.ಅವು ಅಲ್ಲಲ್ಲಿ ಹರಿದಿದೆ, ಹಾಳಾಗಿವೆ, ಅಳತೆ ತಪ್ಪಿವೆ, ಆಕಾರ ತಪ್ಪಿವೆ, ಅಶೋಕಚಕ್ರವು ಎತ್ತೆತ್ತಲೋ ಹೊರಳಿದೆ, ಚಕ್ರದ ಕೀಲುಗಳ ಸಂಖ್ಯೆ ಏರುಪೇರಾಗಿವೆ ಎಂಬ ಸಂಗತಿಯು ತಮ್ಮ ಗಮನಕ್ಕೆ ಬಂದಿಲ್ಲವೆ? ಇಂತಹ ಬಾವುಟಗಳ ಭ್ರಷ್ಟ ಉತ್ಪಾದಕರನ್ನು ಶಿಕ್ಷಿಸುವ ಬದಲು ಭ್ರಷ್ಟಗೊಂಡ ಬಾವುಟಗಳನ್ನೇ ಅಧಿಕೃತವಾಗಿ ಮಾರಾಟ ಮಾಡುವುದು ಭ್ರಷ್ಟಾಚಾರವಲ್ಲವೆ?

4.ನಮ್ಮ ಧ್ವಜ ಅಹಿಂಸೆಯ ದ್ಯೋತಕವಾದದ್ದು. ಶಾಂತಿಪ್ರಿಯ ಅಶೋಕನ ಲಾಂಛನ ಹಾಗೂ ಅಹಿಂಸಾತ್ಮಕ ಖಾದಿಬಟ್ಟೆಗಳು ಅದರಲ್ಲಿ ಅಂತರ್ಗತವಾಗಿವೆ. ಹೀಗಿರುವಾಗ, ಸ್ವಾತಂತ್ರ್ಯದ ಅಮೃತಮಹೋತ್ಸವದ ಬಾವುಟ ಕಾರ್ಯಕ್ರಮವನ್ನು ಯುದ್ಧಭೂಮಿಯೊಂದರಿಂದ ಉದ್ಘಾಟಿಸಿ, ಭಾರತವು ಹಿಂಸಾವಾದಿ ದೇಶವೆಂಬ ಸಂಕೇತವನ್ನೇಕೆ ಜಗತ್ತಿಗೆ ಸಾರುತ್ತಿದ್ದೀರಿ?

5.ಸಿಂಥೆಟಿಕ್ ಬಾವುಟಗಳ ಉದ್ಪಾದನೆ, ನಿರ್ಮಾತ, ವಿತರಣೆಗೆಂದು ತಮ್ಮ ಸರಕಾರವು ಎಷ್ಟು ಪ್ರಮಾಣದ ತೆರಿಗೆ ಹಣವನ್ನು ಖರ್ಚು ಮಾಡಿದೆ? ಇತ್ತ ಖಾದಿ ಹಾಗೂ ಗ್ರಾಮೋದ್ಯೋಗದ ಉದ್ಪಾದನೆ, ಆಯಾತ, ವಿತರಣೆಯನ್ನೇ ಹೆಚ್ಚುಕಡಿಮೆ ಸ್ಥಗಿತಗೊಳಿಸಿರುವ ತಮ್ಮ ಸರಕಾರವು ಇದೇ ಹಣವನ್ನು ಗ್ರಾಮೋದ್ಯೋಗದ ಪುನಶ್ಚೇತನಕ್ಕಾಗಿ ಖಚರ್ು ಮಾಡಬಹುದಿತ್ತಲ್ಲವೇ? ಬಡವರ ಪರವಾದ ಕಾರ್ಯಕ್ರಮವಲ್ಲವೇ ಸ್ವದೇಶಿ?

6.ಭಾರತದ ರಾಷ್ಟ್ರಧ್ವಜವು ಚೀನಾದಿಂದ ನಿರ್ಮಾತಗೊಂಡು ಅಧಿಕೃತವಾಗಿ ಮಾರಾಟಗೊಳ್ಳುತ್ತಿದೆ ಎಂಬ ಸುದ್ಧಿ ನಿಜವೇ?

7.ರಾಷ್ಟ್ರಧ್ವಜವನ್ನು ಕೆಳಗಿಳಿಸುವ ಅಗತ್ಯವಿಲ್ಲ. ಮಳೆಯಿರಲಿ, ಬಿಸಿಲಿರಲಿ, ಹಗಲಿರಲಿ, ರಾತ್ರಿಯಿರಲಿ, ಧ್ವಜವು ಹರಿದಿರಲಿ, ಮಲಿನವಾಗಿರಲಿ, ಕಂಬಕ್ಕೆ ಜೋತು ಬಿದ್ದಿರಬೇಕು ಎಂದು ಧ್ವಜನಿಯಮವನ್ನು ತಾವು ತಿದ್ದಿರುವುದು ಸರಿಯೇ?

8.ಹರ್-ಘರ್-ತಿರಂಗ ಎಂಬುದು, ವಿದೇಶಿಯರೇ ದೇಶಬಿಟ್ಟು ತೊಲಗಿ ಎಂಬ ಸ್ವದೇಶಿ ಚಳುವಳಿಯ ಕೂಗಾಗಿತ್ತು. ಪವಿತ್ರ ಆರ್ಥಿಕತೆ ಹಾಗೂ ಸ್ವದೇಶಿ ಉತ್ದಾದನೆಗಳನ್ನು ಕಡೆಗಣಿಸಿರುವ ತಮ್ಮ ಸರಕಾರವು ಹರ್-ಘರ್-ತಿರಂಗ ಎಂದು ಕೂಗುವುದು ವಿಪರ್ಯಾಸವಲ್ಲವೆ?

9.ಸರಕಾರದ ಅಧೀನದಲ್ಲಿರುವ ಖಾದಿ ಸಂಸ್ಥೆಯು ಶುದ್ಧ ಖಾದಿಬಾವುಟವನ್ನು ಸಾಮಾನ್ಯರ ಕೈಗೆಟುಕದಂತಹ, ಅತಿ ದುಬಾರಿಬೆಲೆಗೆ ಮಾರುತ್ತಿರುವುದು ಸರಿಯೆ?

10.ಕಲೆ ಹಾಗೂ ಸಾಹಿತ್ಯಗಳಿಗೆ ಸಂಬಂಧಿಸಿದ ಅಕಾಡೆಮಿಗಳು ಸರಕಾರದ ಕಾರ್ಯಕ್ರಮವನ್ನು ಬೆಂಬಲಿಸುವಂತೆ ಸಾಹಿತಿ ಕಲಾವಿದರುಗಳ ಮೇಲೆ ಬಲವಂತ ಹೇರುತ್ತಿರುವುದು ತಮ್ಮ ಗಮನಕ್ಕೆ ಬಂದಿಲ್ಲವೇ? ಈ ಪ್ರಶ್ನೆಗಳಿಗೆ ಉತ್ತರವಿದೆಯೋ ಗೊತ್ತಿಲ್ಲ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago