ನಂಜನಗೂಡು: ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ನಂಜನಗೂಡು ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಮುದ್ದಹಳ್ಳಿ, ಎಲಚಗೆರೆ ಮತ್ತು ಸಿಂಧುವಳ್ಳಿಪುರ ಗ್ರಾಮಗಳ ರೈತರ ಸುಮಾರು 448. 38 ಎಕರೆ ಕೃಷಿ ಭೂಮಿಯನ್ನು ಕೆಐಎಡಿಬಿ ಕೈಗಾರಿಕೆಗೆ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವುದನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ವೃತ್ತದಿಂದ ತಾಲೂಕು ಆಡಳಿತ ಭವನದವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆಯನ್ನು ನಡೆಸಲಾಯಿತು.
ಸರ್ವೋದಯ ಸಂಘಟನೆಯ ಉಗ್ರನರಸಿಂಹೇಗೌಡ ಮಾತನಾಡಿ, ರೈತರ ಭೂಮಿಯನ್ನು ಕೆಐಎಡಿಬಿ ವಸಪಡಿಸಿಕೊಳ್ಳಲು ಮುಂದಾಗಿದೆ. ಭೂಮಿಯನ್ನು ಮಾರಾಟ ಮಾಡಲು ನಾವು ಸಿದ್ಧವಿಲ್ಲ ಎಂದು ರೈತರು ಹೇಳಿದರು ಕೂಡ ಬಂತವಾಗಿ ಭೂಸ್ವಾಧೀನವನ್ನು ಮಾಡುತ್ತಿದ್ದಾರೆ. ರೈತರು ನಾವು ಭೂಮಿಯನ್ನು ಕೊಡುವುದಿಲ್ಲ ಎಂದರು ಕೂಡ ಬಿಡುತ್ತಿಲ್ಲ ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ರೈತರು ಹಾಗೂ ಮೂರು ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.