News Karnataka Kannada
Thursday, May 02 2024
ಮೈಸೂರು

ಕೃಷಿ ಇಲಾಖೆ ಅಧಿಕಾರಿಗಳ ದಾಳಿ: 137 ಕ್ವಿಂಟಾಲ್ ಬಿತ್ತನೆ ಬೀಜ ಅಕ್ರಮ ದಾಸ್ತಾನು ವಶ

ಬಿತ್ತನೆ ಬೀಜ ಮಾರಾಟದ ಆವರಣದಲ್ಲಿರುವ ಗೋದಾಮಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ 137 ಕ್ವಿಂಟಾಲ್ ಬಿತ್ತನೆ ಬೀಜ ವಶಪಡಿಸಿಕೊಂಡಿದ್ದಾರೆ.
Photo Credit : News Kannada

ನಂಜನಗೂಡು: ಬಿತ್ತನೆ ಬೀಜ ಮಾರಾಟದ ಆವರಣದಲ್ಲಿರುವ ಗೋದಾಮಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ 137 ಕ್ವಿಂಟಾಲ್ ಬಿತ್ತನೆ ಬೀಜ ವಶಪಡಿಸಿಕೊಂಡಿದ್ದಾರೆ.

ಸಾಕಷ್ಟು ದಿನಗಳಿಂದ ನಂಜನಗೂಡು ತಾಲೂಕಿನ ಬಿತ್ತನೆ ಬೀಜ ಮಾರಾಟದ ಕೇಂದ್ರಗಳಲ್ಲಿ ರೈತರಿಗೆ ದೊರಕಬೇಕಾದ ಬಿತ್ತನೆ ಬೀಜಗಳನ್ನು ಅನಧಿಕೃತವಾಗಿ ಗೌಪ್ಯವಾಗಿಟ್ಟು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತದೆ ಎಂಬ ಆರೋಪ ಕೇಳಿ ಬರುತ್ತಿತ್ತು. ಇದನ್ನು ಅರಿತ ಮೈಸೂರಿನ ಕೃಷಿ ಇಲಾಖೆ ಅಧಿಕಾರಿಗಳು ಬೆಂಗಳೂರಿನ ಉನ್ನತ ಮಟ್ಟದ ಕೃಷಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಮೈಸೂರಿನ ಜಾಗೃತ ಕೋಶ ಮತ್ತು ಜಾಗೃತ ದಳ ಅಧಿಕಾರಿಗಳ ತಂಡ ನಂಜನಗೂಡಿನ ಕೃಷಿ ಅಧಿಕಾರಿಗಳ ಸಹಯೋಗದಲ್ಲಿ ಅನುಮಾನ ವ್ಯಕ್ತವಾಗಿದ್ದ ಕಡೆ ದಾಳಿ ಮಾಡಿದಾಗ ಅಕ್ರಮವಾಗಿ ಬಚ್ಚಿಟ್ಟಿದ್ದ ವಿವಿಧ ಕಂಪನಿಯ ಬತ್ತದ ಬಿತ್ತನೆ ಬೀಜಗಳ ಚೀಲಗಳು ಕೃಷಿ ಮತ್ತು ಜಾಗೃತದಳದ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿವೆ.

ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಮಾರಾಟ ಕೇಂದ್ರ ನಂಜನಗೂಡು ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಗೋಧಾಮ ಗಳಲ್ಲಿ ಬರೋಬರಿ 137 ಕ್ವಿಂಟಲ್ ವಿವಿಧ ಬಗೆಯ ಬತ್ತದ ಬಿತ್ತನೆ ಬೀಜದ ಚೀಲಗಳನ್ನು ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ.

ಮೈಸೂರಿನ ಕೃಷಿ ಉಪ ನಿರ್ದೇಶಕರಾದ ಭಾನುಪ್ರಕಾಶ್ ಜಾಗೃತ ದಳದ ಅಧಿಕಾರಿ ದಿವಾಕರ್ ನಂಜನಗೂಡಿನ ಕೃಷಿ ಇಲಾಖೆ ಅಧಿಕಾರಿ ರವಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು