News Karnataka Kannada
Thursday, May 02 2024
ಮೈಸೂರು

28 ಸ್ಥಾನಗಳಲ್ಲಿಯೂ ಮೈತ್ರಿಕೂಟಕ್ಕೆ ಗೆಲುವು: ಎಸ್. ಬಾಲರಾಜ್

ಜೆಡಿಎಸ್ -ಬಿಜೆಪಿ ಹೊಂದಾಣಿಕೆಯಿಂದ ಎಲ್ಲ 28   ಕ್ಷೇತ್ರಗಳನ್ನು ಮೈತ್ರಿಕೂಟ ಗೆಲ್ಲಲಿದೆ ಎಂದು ಚಾಮರಾಜನಗರ  ಲೋಕಸಭಾ  ಬಿಜೆಪಿ ಅಭ್ಯರ್ಥಿ  ಎಸ್. ಬಾಲರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Photo Credit : By Author

ತಿ.ನರಸೀಪುರ: ಜೆಡಿಎಸ್ -ಬಿಜೆಪಿ ಹೊಂದಾಣಿಕೆಯಿಂದ ಎಲ್ಲ 28   ಕ್ಷೇತ್ರಗಳನ್ನು ಮೈತ್ರಿಕೂಟ ಗೆಲ್ಲಲಿದೆ ಎಂದು ಚಾಮರಾಜನಗರ ಲೋಕಸಭಾ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ತಲಕಾಡು ಶಿವಪಾರ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ – ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಬಿಜೆಪಿ -ಜೆಡಿಎಸ್ ಪಕ್ಷಗಳು ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ  ಎದುರಿಸುತ್ತಿರುವುದರಿಂದ  ಕಾಂಗ್ರೆಸ್ ಪಕ್ಷದಲ್ಲಿ ನಡುಕ ಶುರುವಾಗಿದೆ. . ಜೆಡಿಎಸ್ -ಬಿಜೆಪಿ ಹೊಂದಾಣಿಕೆಯಿಂದ  ಮತ್ತು ಕುಮಾರಸ್ವಾಮಿ, ವಿಜಯೇಂದ್ರ ಚುನಾವಣಾ ತಂತ್ರಗಳನ್ನು ಅನುಸರಿಸುತ್ತಿದ್ದು,  ಎಲ್ಲಾ  ಕ್ಷೇತ್ರಗಳನ್ನು ಮೈತ್ರಿಕೂಟ ಗೆಲ್ಲಲಿದೆ ಎಂದರು.

ನಾನು 30ವರ್ಷಗಳ ಕಾಲ ರಾಜಕೀಯ ವನವಾಸ ಅನುಭವಿಸಿದ್ದೇನೆ. ಈಗ ಸುವರ್ಣ ಅವಕಾಶ ಸಿಕ್ಕಿದೆ. ಈ ಚುನಾವಣೆ ಧರ್ಮ ಮತ್ತು ಅಧರ್ಮದ ನಡುವಿನ ಹೋರಾಟವಾಗಿದೆ. ಧರ್ಮ ಗೆಲ್ಲಲಿದೆ.. ಹಾಗಾಗಿ ಕಾಂಗ್ರೆಸ್ ಪಕ್ಷ  ದುಡ್ದುಕೊಟ್ಟು ಮತ  ಖರೀದಿ ಮುಂದಾಗಿದೆ.  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನನ್ನ ಮೇಲೆ ಇಲ್ಲಸಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದಾರೆ. ನೈತಿಕವಾಗಿ ಎದುರಿಸಲು ಸಾಧ್ಯವಾಗದೆ ವೈಯುಕ್ತಿಕ ತೇಜೋವಧೆ ಮಾಡಲು ಹುನ್ನಾರ ನಡೆಸಿದ್ದಾರೆ  ಎಂದು ಆರೋಪಿಸಿದರು.

ವಿಕಸಿತ ಭಾರತದ ದೂರದೃಷ್ಠಿಯಲ್ಲಿ ದೇಶವನ್ನು ಮುನ್ನೆಡೆಸಲು ನರೇಂದ್ರ ಮೋದಿ ಅವರು ಸನ್ನದ್ಧವಾಗಿದ್ದಾರೆ. ಅವರ ಕೈ ಬಲಪಡಿಸಲು ನನ್ನನ್ನು ಗೆಲ್ಲಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು