News Karnataka Kannada
Friday, May 03 2024
ಮೈಸೂರು

ಟಿಕೆಟ್ ಘೋಷಣೆಗೆ ಮುನ್ನ ವಿಚಲಿತರಾಗದಂತೆ ಪ್ರತಾಪ್ ಸಿಂಹಗೆ ಮನವಿ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಟಿಕೆಟ್ ಘೋಷಣೆಗೂ ಮುನ್ನವೇ ಸಂಸದ ಪ್ರತಾಪಸಿಂಹ ಭಾವನಾತ್ಮಕ ಮತ್ತು ವಿಚಲಿತರಾಗಿ ಮಾತನಾಡುವುದು ಬೇಡ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.
Photo Credit : By Author

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಟಿಕೆಟ್ ಘೋಷಣೆಗೂ ಮುನ್ನವೇ ಸಂಸದ ಪ್ರತಾಪಸಿಂಹ ಭಾವನಾತ್ಮಕ ಮತ್ತು ವಿಚಲಿತರಾಗಿ ಮಾತನಾಡುವುದು ಬೇಡ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೂ ಟಿಕೆಟ್ ಸಿಗಬಹುದು. ಹಾಗಾಗಿ ಆತಂಕಕ್ಕೆ ಒಳಗಾಗಿ ಮಾತಾಡುವುದನ್ನು ನಿಲ್ಲಿಸುವಂತೆ ಮನವಿ ಮಾಡುತ್ತೇನೆ. ಪ್ರತಾಪಸಿಂಹ ಅವರು ಕೇಂದ್ರದ ನಾಯಕರೊಂದಿಗೆ ಮಾತನಾಡಲು ಬೆಂಗಳೂರಿಗೆ ಹೋಗಿದ್ದಾರೆ. ಇನ್ನೂ ಚರ್ಚೆಗಳು ನಡೆಯುತ್ತಿವೆ ಭಾವನಾತ್ಮಕವಾಗಿ ಮಾತನಾಡಿದರೆ ಪಕ್ಷ ಮುಜುಗರ ಅನುಭವಿಸಬೇಕಾಗುತ್ತದೆ ಎಂದು ನುಡಿದರು.

ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ಮೈಸೂರು ಲೋಕಸಭಾ ಟಿಕೆಟ್ ವಿಚಾರವಾಗಿ ಎರಡು ದಿನಗಳಿಂದ ಗೊಂದಲ ಶುರುವಾಗಿದೆ. ಪ್ರತಾಪಸಿಂಹ ಅವರ ಬದಲು ಬೇರೆ ಹೆಸರು ಮುನ್ನಲೆಗೆ ಬಂದಿದೆ. ರಾಜ್ಯದ ಯಾವ ನಾಯಕರಿಗೂ ಟಿಕೆಟ್ ಘೋಷಿಸುವ ಅಧಿಕಾರ ಇಲ್ಲ ಎಂದು ಸ್ಪಷ್ಟಪಡಿಸಿದರು.

10 ವರ್ಷಗಳ ಹಿಂದೆ ಪ್ರತಾಪಸಿಂಹ ಅವರು ಮೈಸೂರಿಗೆ ಬಂದಾಗ ಪರಿಚಯವೇ ಇರಲಿಲ್ಲ. ಅವರನ್ನು ಗೆಲ್ಲಿಸಿದೆವು. ಪ್ರತಾಪಸಿಂಹ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ, ಪಕ್ಷದ ತೀರ್ಮಾನ ಒಪ್ಪಬೇಕಾಗುತ್ತದೆ. ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡಬೇಕಾಗುತ್ತದೆ. ಮಹಾರಾಜರು ಮೈಸೂರು ಅಭಿವೃದ್ಧಿಗೆ ತಮ್ಮ ಸರ್ವಸ್ವ ಅರ್ಪಿಸಿದ್ದಾರೆ. ಈಗ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ತಿಳಿಸಿದರು.

ಪಕ್ಷದೊಳಗೆ ಯಾವುದೇ ಒಡಕಿಲ್ಲ. ಟಿಕೆಟ್ ಬದಲಿಸುವ ಪ್ರಯತ್ನವನ್ನೂ ಸ್ಥಳೀಯ ನಾಯಕರು ಮಾಡಿಲ್ಲ. ನಾಯಕರಾದ ಕೆ.ಎಸ್. ಈಶ್ವರಪ್ಪ ಅವರು ಅಭಿಪ್ರಾಯ ಸಂಗ್ರಹಿಸಿದ್ದರು. ಡಾ.ಮಂಜುನಾಥ್ ಮತ್ತು ಅಪ್ಪಚ್ಚು ರಂಜನ್ ಟಿಕೆಟ್‌ಗೆ ಆಪೇಕ್ಷೆ ಪಟ್ಟಿದ್ದರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಫೇಸಬುಕ್ ಲೈವ್‌ನಲ್ಲಿ ನಡವಳಿಕೆಯಿಂದಲೇ ಎಲ್.ನಾಗೇಂದ್ರ ಚುನಾವಣೆಯಲ್ಲಿ ಪರಾಭವಗೊಂಡರೆಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ನಡವಳಿಕೆಯಿಂದ ಪಕ್ಷಕ್ಕೆ ಯಾವುದೇ ಮುಜುಗರವಾಗಿಲ್ಲ. ನನ್ನ ನಡವಳಿಕೆ ಸರಿ ಇದ್ದ ಕಾರಣಕ್ಕೆ ನಗರಾಧ್ಯಕ್ಷ ಸ್ಥಾನ ನೀಡಿದ್ದಾರೆ ಎಂದು ಪ್ರತ್ಯುತ್ತರ ನೀಡಿದರು.

ಮಾಜಿ ಶಾಸಕ ಎಸ್.ಎ.ರಾಮದಾಸ್ಟಿಕೆಟ್ ಹಂಚಿಕೆ ವಿಚಾರವಾಗಿ ಪಾರ್ಲಿಮೆಂಟರಿ ಸಭೆ ನಡೆದಿಲ್ಲ. ಆದರೂ ಅನವಶ್ಯಕ ಚರ್ಚೆ ನಡೆಯುತ್ತಿದೆ. ನಾಲ್ಕು ಬಾರಿ ಶಾಸಕನಾಗಿದ್ದ ನನಗೆ ಹಿಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಲಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುವುದಾಗಿ ನಾಯಕರು ಹೇಳಿದಾಗ ಒಪ್ಪಿದೆ. ಕಾರ್ಯಕರ್ತರ ಸಭೆಯಲ್ಲಿ ಪ್ರತಾಪಸಿಂಹ ಅವರು ನನಗೆ ಆಡಿದ ಮಾತುಗಳನ್ನು ನೆನಪಿಸಿಕೊಳ್ಳಬೇಕು. ಯಾರೇ ಅಭ್ಯರ್ಥಿಯಾದರೂ ಗೆಲ್ಲಿಸುವುದು ನಮ್ಮ ಗುರಿ ಎಂದಿದ್ದಾರೆ.

ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಮುಖಂಡರಾದ ಸಂದೇಶ್ ಸ್ವಾಮಿ, ಕೇಬಲ್ ಮಹೇಶ್, ಗಿರಿಧರ್ ಮುಂತಾದವರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು