News Karnataka Kannada
Tuesday, May 07 2024
ಮೈಸೂರು

ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ರಕ್ತದಾನದ ಅರಿವು

Camp
Photo Credit : By Author

ಮೈಸೂರು: ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮುಂಜಾನೆ ವಾಯು ವಿಹಾರಿಗಳಿಗೆ ರಕ್ತದಾನದಿಂದ ಆಗುವ ಉಪಯೋಗಗಳ ಬಗ್ಗೆ ಕರಪತ್ರ ನೀಡಿ, ರಕ್ತದಾನ ಮಹಾದಾನ, ಒಂದು ಹನಿ ರಕ್ತ ಒಂದು ಅಮೂಲ್ಯ ಜೀವದ ಉಳಿಯುವಿಕೆಗಾಗಿ ನೆರವಾಗಲಿದೆ ಎಂಬ ಘೋಷಣಾ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ ರವಿ ಅವರು,  ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ರಕ್ತದಾನದ ಮಹತ್ವ ಅರಿತು ಒಂದು ಜೀವ ಉಳಿಸುವ ಸದುದ್ದೇಶದಿಂದ ರಕ್ತದಾನ ಮಾಡಬೇಕು. ರಕ್ತವನ್ನು ಉತ್ಪತ್ತಿ ಮಾಡಲು ಸಾಧ್ಯವಿಲ್ಲ. ಆರೋಗ್ಯವಂತ ವ್ಯಕ್ತಿ ಮತ್ತೊಬ್ಬರಿಗೆ ರಕ್ತದಾನ ಮಾಡಿದರೆ ತುರ್ತು ಸಂದರ್ಭದಲ್ಲಿ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ. ರಕ್ತದ ಅಗತ್ಯ ಮತ್ತು ಯಾರು ರಕ್ತದಾನ ಮಾಡಬಹುದು, ಎಷ್ಟು ದಿನಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದು ಹೇಳಿದರು.

ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ ಯುವತರುಣರೇ ತುಂಬಿರುವಂತಹ ಬಾರತೀಯ ಸಮಾಜದಲ್ಲಿ ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು, ನಮ್ಮ ಒಂದೊಂದು ಹನಿರಕ್ತವು  ಒಂದೊಂದು ಜೀವವನ್ನು ಬದುಕಿಸುತ್ತದೆ, ಇದರಿಂದ ಆರೋಗ್ಯವಂತ ಭಾರತ  ನಿರ್ಮಾಣವಾಗುತ್ತದೆ ಎಂದರು.

ಕರ್ನಾಟಕ ಚಲನಚಿತ್ರ ಮಂಡಳಿಯ  ಸದಸ್ಯ  ಎಂ ಡಿ ಪಾರ್ಥಸಾರಥಿ, ಚಾಮುಂಡೇಶ್ವರಿ ಯುವಬಳಗದ ಅಧ್ಯಕ್ಷ ಶ್ರೀನಿವಾಸ್,  ಉಪಾಧ್ಯಕ್ಷ ವಿನಯ್ ಕುಮಾರ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ಉದ್ಯಮಿ ಅಪೂರ್ವ ಸುರೇಶ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್ ಶ್ರೀಕಾಂತ್ ಕಶ್ಯಪ್, ಶಿವಕುಮಾರ್, ರಕ್ತನಿಧಿ ಕೇಂದ್ರದ ಪ್ರಭು ಹಾಗೂ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು