ಮೈಸೂರು: ಹತ್ತು ವರ್ಷಗಳ ಕಾಲ ಸಂಸದನಾಗಿ ಕೆಲಸ ಮಾಡಲು ಅವಕಾಶ ನೀಡಿದ ಬಿಜೆಪಿ ಪಕ್ಷಕ್ಕೆ ದ್ರೋಹ ಬಗೆಯಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಎಂಜಿ ರೋಡ್ನಲ್ಲಿರುವ ಕಚೇರಿಯಲ್ಲಿ ಕುಳಿತು ಬರೆಯುತ್ತಿದ್ದ ನನಗೆ ಟಿಕೆಟ್ ನೀಡಿ, 10 ವರ್ಷಗಳ ಕಾಲ ಸಂಸದರನ್ನಾಗಿ ಮಾಡಿದ ಬಿಜೆಪಿಗೆ ನಾನು ದ್ರೋಹ ಬಗೆಯುವುದಿಲ್ಲ. 2014 ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಎಂದು ಬಿಜೆಪಿ ಹೈಕಮಂಡ್ ಹೇಳಿರಲಿಲ್ಲ. ನಾನು ಯಾಕೆ ಕೊಟ್ಟರಿ ಅಂತಾ ಕೇಳಿಲಿಲ್ಲ. ಈಗಲೂ ಅಷ್ಟೇ ಯಾಕೆ ಟಿಕೆಟ್ ತಪ್ಪಿಸಿದ್ದೀರಿ ಎಂದು ನಾನು ಕೇಳಿಯೂ ಇಲ್ಲ. ಅವರು ಹೇಳಿಯೂ ಇಲ್ಲ ಎಂದು ಹೇಳಿದರು.
ನನಗೆ ಸಂಸದನಾಗುವ ಅವಕಾಶ ಹಾಗೂ ರಾಜಕೀಯವಾಗಿ ಬೆಳೆಯುವ ಶಕ್ತಿ ನೀಡಿದ್ದು ಬಿಜೆಪಿ. ನನಗೆ ಪಕ್ಷ ತಾಯಿಯಿದ್ದಂತೆ, ಯಾವತ್ತೂ ತಾಯಿಗೆ ದ್ರೋಹ ಬಗೆಯುವುದಿಲ್ಲ. ಪಕ್ಷದ ಶಿಸ್ತಿನ ಶಿಪಾಯಿಯಂತೆ ಇರುತ್ತೇನೆ. ನನ್ನನ್ನು ಕೇಳಿ ಬೇರೆ ಯಾರಿಗಾದರೂ ಟಿಕೆಟ್ ಕೊಡಬೇಕೆಂದೇನೂ ಇಲ್ಲ. ನನಗೆ ಯಾವುದೇ ಸ್ಥಾನ-ಮಾನ ಬೇಕಾಗಿಲ್ಲ. ಕಳೆದ 10 ವರ್ಷದಲ್ಲಿ ಎಲ್ಲರ ನೀರೀಕ್ಷೆ ಮೀರಿ ಕೆಲಸ ಮಾಡಿದ್ದೇನೆ ಎಂದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…