ಮೈಸೂರು

ಮೋದಿಯವರೊಂದಿಗೆ ದೇಶ ಸೇವೆ ಮಾಡುವ ಬಯಕೆ ಇದೆ: ಭಾಸ್ಕರ್ ರಾವ್

ಮೈಸೂರು: ನರೇಂದ್ರ ಮೋದಿಯವರು ವಿಶ್ವಮಾನ್ಯ ನಾಯಕರಾಗಿದ್ದಾರೆ. ಅಂತಹ ಮಹಾನ್ ನಾಯಕರ ಅಧೀನದಲ್ಲಿ ನಾನೂ ಸಹ ದೇಶ ಸೇವೆ ಮಾಡಬೇಕೆಂಬ ಅದಮ್ಯ ಬಯಕೆ ಇದೆ. ತಾವೆಲ್ಲರೂ ಮೈಸೂರು-ಕೊಡಗು ಲೋಕಸಭೆಯಲ್ಲಿ ಸ್ಪರ್ಧೆ ಮಾಡಲು‌ ಸಮುದಾಯದ ಬೆಂಬಲ ನನಗೆ‌ ಬಹಳ ಮುಖ್ಯ ಎಂದು ಮೈಸೂರು ಕೊಡಗು ಲೋಕಸಭಾ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ಆರಾಧ್ಯ ಮಹಾಸಭಾದಲ್ಲಿ ಬ್ರಾಹ್ಮಣ ಸಂಘಟನೆಗಳಿಂದ ಮೈಸೂರು-ಕೊಡಗು ಲೋಕಸಭಾ ಚುನಾವಣೆಯ ಸಂವಾದದಲ್ಲಿ ಅವರು ಮಾತನಾಡಿ, ಬ್ರಾಹ್ಮಣ ಸಮುದಾಯ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು. ಬ್ರಾಹ್ಮಣ ಸಮುದಾಯದ ಬಡವರನ್ನು ಉದ್ದಾರ ಮಾಡುವ ಕೆಲಸ ಮಾಡಬೇಕು. ಜೈನ್ ಮತ್ತು ಸಿಖ್ ಧರ್ಮದಲ್ಲಿ ಬಡವರನ್ನು ಮೇಲೆತ್ತಲು ಇಡೀ ಸಮುದಾಯದವರೇ ಟೊಂಕ ಕಟ್ಟಿ ನಿಲ್ಲುತ್ತಾರೆ. ಅಂತಹದ್ದೇ ಮನೋಭಾವ ಬ್ರಾಹ್ಮಣ ಸಮುದಾಯದಲ್ಲೂ ಬರಬೇಕು ಎಂದರು.

ಬ್ರಾಹ್ಮಣರಲ್ಲಿ ಸಂಸ್ಕಾರ ಮತ್ತು ಬುದ್ದಿವಂತಿಕೆ ಇದೆ. ಆದರೆ, ಆರ್ಥಿಕವಾಗಿ ದುರ್ಬಲರಾದವರೂ ಇದ್ದಾರೆ. ಇಂತಹ ಸಂದರ್ಭದಲ್ಲಿ ಸ್ಥಿತಿವಂತ ಬ್ರಾಹ್ಮಣರು ಬಡವರ ಬಗ್ಗೆ ಪ್ರೀತಿ ಮತ್ತು ಕಾಳಜಿ ಬರಬೇಕು. ನಾನು ಪೊಲೀಸ್ ಇಲಾಖೆಯಲ್ಲಿ ಸತತ 34 ವರ್ಷ ಕೆಲಸ ಮಾಡಿದ್ದೇನೆ. ಇಡೀ ಸೇವೆಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಕೆಲಸ ಮಾಡಿದ ತೃಪ್ತಿ ನನಗಿದೆ. ನಾನೂ ಸಹ ಮೂಲತಃ ಮೈಸೂರು ಜಿಲ್ಲೆಯವನೇ, ನಂಜನಗೂಡು ತಾಲೂಕಿನ ಕಳಲೆ ನಮ್ಮ ಹುಟ್ಟೂರು. ನಮ್ಮ‌‌‌ ಪೂರ್ವಿಕರೆಲ್ಲರೂ ಮೈಸೂರಿನಲ್ಲೇ ನೆಲಸಿದ್ದರು. ನಮ್ಮ ತಾತ ಮೊದಲ‌ ಮಹಾ ಯುದ್ದದಲ್ಲಿ ಮೈಸೂರ್ ಲ್ಯಾನ್ಸರ್ ಸೇನೆಯಲ್ಲಿ ಅಶ್ವಪಡೆ ಸೈನಿಕರಾಗಿ ಇಸ್ರೇಲ್ ಗೆ ಹೋಗಿ ಹೋರಾಡಿ ಬಂದಿದ್ಧರೆಂದು ಸ್ಮರಿಸಿದರು.

ಮೈಸೂರು ಕೇವಲ ಸಾಂಸ್ಕೃತಿಕ ನಗರ ಮಾತ್ರ ಅಲ್ಲ. ಅತ್ಯಂತ ದೈರ್ಯ ಮತ್ತು ಆಕ್ರಮಣಕಾರಿ ಮನೋಭಾವ ಇಲ್ಲಿನ ಜನರಲ್ಲಿದೆ. ನಾನು ಮೈಸೂರು ಭಾಗದಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿದ್ದೇನೆ. ನಾನು ಸೇವೆ ಸಲ್ಲಿಸಿದ ಸಂದರ್ಭ ಯಾರದ್ದೂ ಒಂದು ಹನಿ ರಕ್ತ ಕೆಳಗೆ ಬೀಳದಂತೆ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಬಂದಿದ್ದೆನೆ. ರಾಜಕಾರಣಕ್ಕೆ ಬಂದಿರುವೆ, ಇಲ್ಲಿಯೂ ಸಹ ನನ್ನಿಂದ ಒಂದೇ ತಪ್ಪು ಆಗಲ್ಲ. ತಪ್ಪು ಮಾಡಲು ಭಯಪಡುವ ಸ್ವಭಾವ ನನ್ನದು. ಅವಕಾಶ ಸಿಕ್ಕರೆ ನೀವು ನಮ್ಮ ಮೇಲಿಟ್ಟಿರುವ ಭರವಸೆಯನ್ನು ಖಂಡಿತಾ ಉಳಿಸಿಕೊಳ್ಳುವೆ ಎಂದು ಹೇಳಿದರು.

ಭಾಷಣಕ್ಕೂ ಮುನ್ನ ನಡೆದ ಸಂವಾದದಲ್ಲಿ ವಿಪ್ರ ಮುಖಂಡರು ಈ ಬಾರಿ ಮೈಸೂರು ಲೋಕಸಭೆಯಿಂದ ಭಾಸ್ಕರ್ ರಾವ್ ಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿತು. ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರ 2.60. ಲಕ್ಷ ಮತಗಳಿವೆ. ಒಂದು ಬಾರಿಯೂ ಬ್ರಾಹ್ಮಣರಿಗೆ ಲೋಕಸಭೆ ಟಿಕೆಟ್ ನೀಡಿಲ್ಲ. ಈ ಬಾರಿ ಮೈಸೂರಿಗರೇ ಅಗಿರುವ ಭಾಸ್ಕರ್ ರಾವ್ ಅವರಿಗೆ ಟಿಕೆಟ್ ಕೊಡಲಿ ಎಂದು ಸಭೆಯಲ್ಲಿ‌ ಒಕ್ಕೊರಲಿನ ಆಗ್ರಹ ಮಾಡಲಾಯಿತು. ಇದೇ ವೇಳೆ ವಿಪ್ರ ಸಮುದಾಯದ ಹಲವು ಮಂದಿಯನ್ನು ಗಣ್ಯರು ಸನ್ಮಾನಿಸಲಾಯಿತು.

ನಿಮ್ಮ ಭಾಸ್ಕರ್ ರಾವ್ ಎಂಬ ಕಿರುಹೊತ್ತಿಗೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ವಿಶ್ವ ಹಿಂದೂ ಪರಿಷತ್ ನ ಪ್ರಮುಖರಾದ ಕೇಶವಮೂರ್ತಿ, ಬ್ರಾಹ್ಮಣ ಸಭಾದ ಮುಖಂಡರಾದ ಪಾರ್ಥಸಾರಥಿ, ರವೀಂದ್ರ ಇನ್ನಿತರರು ಉಪಸ್ಥಿತರಿದ್ದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago