ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದರು. ಈ ಪೈಕಿ ಸಿ.ಟಿ. ರವಿ, ಸೋಮಣ್ಣ ಪ್ರಮುಖರೆಂದೆ ಹೇಳಬಹುದು. ಇದೀಗ ಆ ಸ್ಥಾನ ವಿಜಯೇಂದ್ರ ಪಾಲಾಗಿದ್ದು, ಹಲವು ನಾಯಕರ ಕಣ್ಣು ಕೆಂಪಗಾಗಿಸಿದೆ. ಇದೇ ಕಾರಣಕ್ಕೆ ಬಿಜೆಪಿ ಕುರಿತು ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣಇಂದು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಡಿಸೆಂಬರ್ 6ರ ನಂತರ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಅರವಿಂದ್ ಲಿಂಬಾವಳಿ ಮಾತಿಗೆ ನನ್ನ ಸಮ್ಮತಿ ಇದೆ. ಪಕ್ಷದಲ್ಲಿ ಸೋಮನಹಳ್ಳಿ ಮುದುಕಿ ಕಥೆ ರೀತಿ ಆಗಿದೆ ಎಂದು ಹೇಳುವ ಮೂಲಕ ಅಸಮಾಧಾನ ಹೊರ ಹಾಕಿದರು. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಸೋಮಣ್ಣ ಮತ್ತಷ್ಟು ಅಸಮಧಾನಗೊಂಡಿದ್ದಾರೆ. ಹೀಗಾಗಿ ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.