ಮೈಸೂರು

ಬಿವೈ ವಿಜಯೇಂದ್ರ ತಾತ್ಕಾಲಿಕ ಅಧ್ಯಕ್ಷ: ಜೂನ್ ನಂತರ ಅಧಿಕಾರ ಉಳಿಯಲ್ಲ

ಮೈಸೂರು: ಬಿ.ವೈ.ವಿಜಯೇಂದ್ರ ತಾತ್ಕಾಲಿಕ ಅಧ್ಯಕ್ಷ, ಜೂನ್ ನಂತರ ಅಧಿಕಾರದಲ್ಲಿ ಉಳಿಯಲ್ಲ. ಲಿಂಗಾಯತರು ಬಿಜೆಪಿ ಬಿಟ್ಟಿದ್ದಾರೆಂದು ಪ್ರಧಾನಿ ಮೋದಿ, ಅಮಿತ್​ ಶಾ ಮಾಡಿರುವ ನಾಟಕ. ನಾಟಕದ ಸ್ಕ್ರಿಪ್ಟ್ ರಚನೆ ಮಾಡಿ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಕೆ.ಪಿ.ಸಿ.ಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮೈಸೂರಿನಲ್ಲಿ ಮಾತನಾಡಿದ ಅವರು ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ. ಜೂನ್ ನಂತರ ಬಿಜೆಪಿ ಅಧ್ಯಕ್ಷರಾಗಲು ಬಿಡಲ್ಲ. ಬಿವೈ ವಿಜಯೇಂದ್ರ ತಾತ್ಕಾಲಿಕ ಅಧ್ಯಕ್ಷ ಅಷ್ಟೇ ಎಂದರು. ಲಿಂಗಾಯತ ಸಮುದಾಯವನ್ನು ಸಮಾಧಾನ ಮಾಡಲು ಆಡಿರುವ ನಾಟಕ. ನಾಟಕವನ್ನ ನಂಬಿ ಲಿಂಗಾಯತರು ಯಾಮಾರಬೇಡಿ ಎಂದು ಹೇಳಿದ್ದಾರೆ.

ಈಗಾಗಲೇ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಬಿ.ಸಿ.ಪಾಟೀಲ್‌, ನಿರಾಣಿ, ಬಸವರಾಜ ಬೊಮ್ಮಾಯಿಗೆ ಪರ್ಮನೆಂಟ್ ರೆಸ್ಟ್ ಕೊಟ್ಟಿದ್ದಾರೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿಯನ್ನು ಹೊರಗೆ ಕಳಿಸಿದರು. ಸಿ.ಸಿ.ಪಾಟೀಲ್ ಕಥೆ ಮುಗಿಸಿದ್ದಾರೆ. ಈಗ ಬಿವೈ ವಿಜಯೇಂದ್ರ ಅವರನ್ನು ಮುಗಿಸಲು ತಾತ್ಕಾಲಿಕ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ ಎಂದು ಹೇಳಿದರು.

Ashika S

Recent Posts

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

15 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

39 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

53 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

1 hour ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago