ಮೈಸೂರು : ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಮತ್ತು ಕೋಣನೂರು ಗ್ರಾಮಗಳಲ್ಲಿ ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಪರ ಅಬ್ಬರದ ಪ್ರಚಾರ ನಡೆಸಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಇಂದಿನಿಂದ ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತಯಾಚನೆ ಮಾಡಿದ್ದಾರೆ. ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಬಡ ಜನರಿಗೆ ಅನುಕೂಲವಾಗಿದೆ.
ಇದನ್ನು ಬಿಜೆಪಿಯವರು ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯರವರ ನೇತೃತ್ವದ ಸರ್ಕಾರದಲ್ಲಿ ಜನಪರವಾದ ಆಡಳಿತವನ್ನು ನಡೆಸುತ್ತಿದ್ದಾರೆ.
ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರೆ ಸುನಿಲ್ ಬೋಸ್ ಅವರನ್ನು ಗೆಲ್ಲಿಸುವ ಮೂಲಕ ಸಿದ್ದರಾಮಯ್ಯರವರ ಕೈಯನ್ನು ಬಲಪಡಿಸಬೇಕು ಎಂದು ಕರೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್, ತಗಡೂರು ಗ್ರಾಪಂ ಅಧ್ಯಕ್ಷೆ ಚಂದ್ರವತಿ ಬಸವರಾಜು, ಉಪಾಧ್ಯಕ್ಷ ಗುರುಮಲ್ಲೇಶ್, ಮಾಜಿ ಗ್ರಾಪಂ ಅಧ್ಯಕ್ಷೆ ಸರಸ್ವತಿ ಗಾರ್ಡನ್ ಮಹೇಶ್, ಕಾಂಗ್ರೆಸ್ ಮುಖಂಡ ಶಿವರಾಂ, ಎಪಿಎಂಸಿ ಉಪಾಧ್ಯಕ್ಷ ಆರ್. ಮಹದೇವ್, ಚಂದ್ರು, ಮುದ್ದುಮಾದಶೆಟ್ಟಿ, ಮಾದಶೆಟ್ಟಿ, ಸುರೇಶ್, ಕುಮಾರ್, ಚಿಕ್ಕಸ್ವಾಮಿ, ನಾಗಣ್ಣ, ರಾಜು , ಸರಿತ ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.