ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ಜ. 15 ಹಾಗೂ 16 ರಂದು ದ್ವಿಚಕ್ರ ವಾಹನಗಳ ಮೂಲಕ ತೆರಳುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.
ಬಿಳಿಗಿರಿರಂಗನ ಬೆಟ್ಟದಲ್ಲಿ ಜನವರಿ 15 ರಿಂದ 18 ರವರೆಗೆ ಬಿಳಿಗಿರಿ ರಂಗನಾಥ ಸ್ವಾಮಿ ರಥೋತ್ಸವ ಹಾಗೂ ಚಿಕ್ಕಜಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ ಅಡಚಣೆ ಹಾಗೂ ಅರಣ್ಯ ಪ್ರದೇಶದ ಕಿರಿದಾದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಇರುವುದರಿಂದ ದ್ವಿಚಕ್ರ ವಾಹನಗಳು ಜನವರಿ 15 ಹಾಗೂ 16 ರಂದು ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.