Categories: ಮೈಸೂರು

ಆಷಾಢ ಮಾಸಕ್ಕೆ ಚಾಮುಂಡಿಬೆಟ್ಟದಲ್ಲಿ ಸ್ವಚ್ಚತಾ ಕಾರ್ಯ

ಮೈಸೂರು: ಆಷಾಢ ಮಾಸದ ಹಿನ್ನೆಲೆ ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮೈಸೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಸ್ವಚ್ಛತಾ ಕಾರ್ಯ ನೆರವೇರಿಸಿದರು.

ಬೆಟ್ಟದ ಪಾದದಿಂದ ದೇವಾಲಯದವರೆಗೂ ಮೆಟ್ಟಿಲುಗಳನ್ನು ಗುಡಿಸಿ, ಮುಳ್ಳಿನ ಗಿಡ ತೆರವುಗೊಳಿಸಿ, ಮಾರ್ಗ ಮಧ್ಯೆದಲ್ಲಿ ಬಿಸಾಡಿದ್ದ ನೀರಿನ ಬಾಟಲ್, ಪ್ಲಾಸ್ಟಿಕ್ ಪೇಪರ್ ಸೇರಿದಂತೆ ಇನ್ನಿತರ ತ್ಯಾಜ್ಯವನ್ನು ಸಂಗ್ರಹಿಸಿ ಸೂಕ್ತ ವಿಲೇವಾರಿ ಮಾಡಿದರು.

ಈ ವೇಳೆ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಮಾತನಾಡಿ, ಆಷಾಢ ಮಾಸದ ದಿನಗಳಂದು ವಾಡಿಕೆಯಂತೆ ಸಾವಿರಾರು ಭಕ್ತರು ಹಾಗೂ ವಿವಿಧ ಹರಕೆ ಹೊತ್ತವರು ಮೆಟ್ಟಿಲುಗಳನ್ನು ಹತ್ತುವ ಮೂಲಕ ಬೆಟ್ಟ ಹತ್ತಿ ದೇವಿಯ ದರ್ಶನ ಪಡೆಯುತ್ತಾರೆ. ಈ ಹಿನ್ನೆಲೆ ಬೆಟ್ಟ ಸ್ವಚ್ಛವಾಗಿರಬೇಕು ಹಾಗೂ ಪರಿಸರಕ್ಕೆ ಹಾನಿಕಾರಕವಾಗಿರುವ ಪ್ಲಾಸ್ಟಿಕ್ ವಸ್ತುಗಳಿಂದ ಮುಕ್ತಗೊಳಿಸಬೇಕು ಎಂಬ ನಿಟ್ಟಿನಲ್ಲಿ ನಮ್ಮ ಗ್ರಾಮ ಪಂಚಾಯಿತಿಗಳ ಪೌರಕಾರ್ಮಿಕರು, ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ಜೊತೆಗೂಡಿ ಸ್ವಚ್ಛಗೊಳಿಸಲಾಗಿದೆ ಎಂದು ತಿಳಿಸಿದರು.

ಚಾಮುಂಡಿಬೆಟ್ಟದ ಪರಿಸರ ಉತ್ತಮವಾಗಿದೆ. ಅಚ್ಚಹರಿಸಿನಿಂದ ಕೂಡಿದೆ. ಸಾರ್ವಜನಿಕರನ್ನು ಇದನ್ನು ಹಾಳು ಮಾಡುವ ಕೆಲಸ ಮಾಡಬಾರದು. ಮೈಸೂರು ದೇಶದ ಸ್ವಚ್ಛನಗರಿಗಳಲ್ಲಿ ಒಂದಾಗಿದ್ದು, ನಗರದ ಸ್ವಚ್ಛತೆ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲೂ ಇದೆ. ಹೀಗಾಗಿ ಪ್ರತಿಯೊಬ್ಬ ನಾಗರೀಕರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಪ್ಲಾಸ್ಟಿಕ್ ನಿಷೇಧ ಮಾಡಿರುವುದರಿಂದ ಬೆಟ್ಟದಲ್ಲಿ ಪ್ಲಾಸ್ಟಿಕ್ ಮಾಡಬಾರದು. ಕೇವಲ ಆಷಾಧ ಮಾಸದಲ್ಲಿ ಮಾತ್ರವಲ್ಲದೆ ಪ್ರತಿದಿನವೂ ಬೆಟ್ಟದ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರ ಮಾರ್ಗದರ್ಶನದಂತೆ ಈ ಹಿಂದೆಯೂ ಚಾಮುಂಡಿಬೆಟ್ಟದಲ್ಲಿ ವರ್ತಕರ ಸಭೆ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆಗೆ ನೀಡದಂತೆ ಮನವರಿಕೆ ಮಾಡಲಾಗಿದೆ. ಅದರಂತೆ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಹಾಗೂ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ನಮ್ಮ ಪೌರಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಚ್ಛಗೊಳಿಸಿದ್ದು ಹೆಮ್ಮೆಯ ವಿಚಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎಸ್‌ಡಿಎ, ಡಿಇಒ ಗಳು, ಪೌರಕಾರ್ಮಿಕ ಸಿಬ್ಬಂದಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

Sneha Gowda

Recent Posts

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

5 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago