ಮೈಸೂರು

ಮೈಸೂರು: ಪಿರಿಯಾಪಟ್ಟಣದ ಹಾರಂಗಿ ಬಲದಂಡೆ ನಾಲೆಯಲ್ಲಿ ಕುಸಿತ

ಮೈಸೂರು: ಮಳೆಯಿಂದ ಭೂ ಕುಸಿತ ಸಂಭವಿಸಿದ ಪರಿಣಾಮ ಪಿರಿಯಾಪಟ್ಟಣ ತಾಲ್ಲೂಕಿನ ಕಣಗಾಲು ಸಮೀಪದ ಹಾರಂಗಿ ಬಲದಂಡೆ ನಾಲೆ ಸಂಪರ್ಕ ಕಲ್ಪಿಸುವ ಕೋಟಯ್ಯನ ಕೊಪ್ಪಲು ಹಾಗೂ ಆನೆಕಟ್ಟೆ ರಸ್ತೆ ಸಂಪರ್ಕ ಕಡಿತಗೊಂಡಿರುವುದು ಬೆಳಕಿಗೆ ಬಂದಿದೆ.

ಹಾರಂಗಿ ಬಲದಂಡೆ ನಾಲೆ ಹಾದು ಹೋಗಿದ್ದು, ಇಲ್ಲಿ ಭೂಕುಸಿತವಾದ ಪರಿಣಾಮ ಮಣ್ಣು ನಾಲೆಗೆ ಬಿದ್ದಿದ್ದು, ನೀರು ಹರಿದು ಹೋಗಲು ಕಷ್ಟವಾಗಿದೆ. ಇನ್ನು ನಾಲೆ ರಸ್ತೆ ಬಳಿ ಒಂದು ಕಿ.ಮೀ ನಷ್ಟು ಡೀಪ್ ಕಟ್ ಇದ್ದು ಸುಮಾರು 90 ರಿಂದ 100 ಅಡಿ ಆಳವಿದೆ,. ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಡೀಪ್ ಕಟ್ ಕೆಲವು ಭಾಗಗಳಲ್ಲಿ ಮಣ್ಣು ಕುಸಿದ ಪರಿಣಾಮ ಕೋಟಯ್ಯನ ಕೊಪ್ಪಲು ರಸ್ತೆ ತಿರುವಿನಲ್ಲಿ ಮಣ್ಣು ಕಾಲುವೆಗೆ ಬಿದ್ದಿದೆ ಇದರಿಂದ ಆನೆಕಟ್ಟೆ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಮಣ್ಣು ಕುಸಿತದ ಕಾರಣ ನಾಲೆಯ ನೀರಿನ ಹರಿವಿಗೆ ತೊಂದರೆಯಾಗಿದೆ. ಈ ಹಿಂದೆಯೂ ಹಲವು ಬಾರಿ ಮಣ್ಣು ಕುಸಿದು ತೊಂದರೆಯಾಗಿದೆ. ಈ ಬಗ್ಗೆ ಹಾರಂಗಿ ಪುನರ್ವಸತಿ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತಂದು ನೂತನವಾಗಿ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದರೂ ಇದುವರೆಗೂ ಹಣ ಬಿಡುಗಡೆಯಾಗಿಲ್ಲ. ಸಮಸ್ಯೆ ಉಂಟಾದ ಸಂದರ್ಭ ತಾತ್ಕಾಲಿಕ ಪರಿಹಾರ ಒದಗಿಸುವ ಬದಲು ಶಾಶ್ವತವಾಗಿ ಸೇತುವೆ ಹಾಗೂ ನಾಲೆ ಬದಿಗಳಲ್ಲಿ ಬ್ಯಾರಿಕೇಡ್ ನಿರ್ಮಾಣ ಮಾಡುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.ಸಂಬಂಧಿಸಿದ ಅಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರಾ ಕಾದು ನೋಡಬೇಕಿದೆ.

Gayathri SG

Recent Posts

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

3 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

23 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

46 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago