ನಂಜನಗೂಡು: ಬೇಲದ ಕುಪ್ಪೆ ಶ್ರೀ ಮಾದೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಇಂದಿನಿಂದ ಸಾಂಕೇತಿಕವಾಗಿ ಮತ ಪ್ರಚಾರಕ್ಕೆ ತೆರಳಿದ ದರ್ಶನ್ ಧ್ರುವನಾರಾಯಣ್.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಉಸ್ತುವಾರಿ ಕೋಟೆ ಸೋಮೇಶ್ ಸೇರಿದಂತೆ ಸಾವಿರಾರು ಕಾರ್ಯಕರ್ತ ಮುಖಂಡರುಗಳು ದರ್ಶನ್ ಧ್ರುವನಾರಾಯಣ್ ಅವರಿಗೆ ಸಾತ್ ನೀಡಿದರು .
ಇದೇ ಸಂದರ್ಭ ಜಯಕಾರದ ಘೋಷಣೆಗಳನ್ನು ಕೂಗಿ ತಮ್ಮ ನೆಚ್ಚಿನ ಅಭ್ಯರ್ಥಿಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ಸಂಭ್ರಮಿಸಿದ ಕಾರ್ಯಕರ್ತ ಮುಖಂಡರು .
ಬಳಿಕ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.