News Karnataka Kannada
Monday, May 20 2024
ಮೈಸೂರು

ಮೈಸೂರು ಕೆ.ಆರ್.ಕ್ಷೇತ್ರದಲ್ಲಿ ‘ಕೈ’ ನಾಯಕರ ಸಮರ

'Congress' leaders battle in Mysuru K.R. constituency
Photo Credit : By Author

ಮೈಸೂರು: ಮೈಸೂರಿನ ವಿಧಾನಸಭಾ ಕ್ಷೇತ್ರಗಳಲ್ಲೊಂದಾದ ಕೆ.ಆರ್.ಕ್ಷೇತ್ರದಲ್ಲಿ ಕೈ ನಾಯಕರ ನಡುವೆ ಸಮರ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದ ಎಂ.ಕೆ.ಸೋಮಶೇಖರ್ ಅವರು ಇದೀಗ ಸೋಲಿಗೆ ಕಾಂಗ್ರೆಸ್ ನ ಮತ್ತೊಬ್ಬ ನಾಯಕರಾಗಿರುವ ನವೀನ್‌ಕುಮಾರ್ ಕಾರಣವೆಂದು ಆರೋಪಿಸಿ ಸಿಎಂಗೆ ಪತ್ರ ಬರೆದಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖಂಡ ನವೀನ್‌ಕುಮಾರ್ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನನ್ನ ವಿರುದ್ಧ ಮಾಡಿರುವ ಆರೋಪ ಸಾಬೀತುಪಡಿಸಿದರೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ಇಲ್ಲದಿದ್ದರೆ ಸೋಮಶೇಖರ್ ಅವರು ರಾಜಕೀಯ ನಿವೃತ್ತಿ ಪಡೆಯುತ್ತಾರೆಯೇ ಎಂದು ಸವಾಲೆಸೆದಿದ್ದಾರೆ.

ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮಶೇಖರ್ ಅವರು ಚುನಾವಣೆಯಲ್ಲಿ ನಾನು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅವರು ಕೆಪಿಸಿಸಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಪತ್ರ ಕಳುಹಿಸಿದ್ದಾರೆ. ಒಂದು ವೇಳೆ ಅವರಿಗೆ ಅನ್ಯಾಯವಾಗಿದ್ದರೆ ಸ್ಥಳೀಯ ಘಟಕಕ್ಕೆ ದೂರು ನೀಡಬೇಕಾಗಿತ್ತು. ಆದರೆ, ಆ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕಾರಣವಾದರೂ ಏನು? ನನ್ನ ರಾಜಕೀಯ ಏಳಿಗೆ ಸಹಿಸದ ಕಾರಣ ಈ ರೀತಿಯ ಆರೋಪ ಮಾಡುವುದು ಹಿರಿಯರಾದ ಎಂ.ಕೆ.ಸೋಮಶೇಖರ್ ಅವರ ವ್ಯಕ್ತಿತ್ವಕ್ಕೆ ತಕ್ಕುದಲ್ಲ. ನಿಮ್ಮ ಸೋಲಿನ ಹಣೆಪಟ್ಟಿಯನ್ನು ಬೇರೆಯವರಿಗೆ ಕಟ್ಟುವುದು ಸರಿಯಲ್ಲ. ನಾನು ಒಂದು ಪರ್ಸೆಂಟ್ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದೇನೆ ಎಂದು ಸಾಬೀತು ಪಡಿಸಿ. ಇಲ್ಲವೇ ರಾಜಕೀಯ ನಿವೃತ್ತಿ ಪಡೆಯಿರಿ ಎಂದು ಸವಾಲು ಹಾಕಿದರು.

ನಾನು ಕೇವಲ ಕೆ.ಆರ್.ಕ್ಷೇತ್ರ ಮಾತ್ರವಲ್ಲದೆ ಹಲವು ಕಡೆ ಪ್ರಚಾರ ಮಾಡಿದ್ದೇನೆ. ಎಲ್ಲೂ ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ಈ ಹಿಂದೆಯೂ ಎಂ.ಕೆ.ಸೋಮಶೇಖರ್ ಸೋತಿದ್ದಾರೆ. ಆ ಸೋಲಿಗೆಲ್ಲಾ ನಾನೇ ಕಾರಣನಾ? ಕಳೆದ ಬಾರಿಗೆ ಹೋಲಿಸಿದರೆ ಅವರಿಗೆ ಈ ಬಾರಿ ಹೆಚ್ಚು ಮತಗಳು ಬಂದಿವೆ. ಇದಕ್ಕೆ ನಮ್ಮಂತಹವರ ಶ್ರಮ ಕಾರಣವಲ್ಲವೇ? ಸೋಲಿಗೆ ನಾನು, ಗೆಲುವಿಗೆ ಅವರು ಜವಾಬ್ದಾರರಾ? ಕೆಪಿಸಿಸಿ ಈ ಕುರಿತು ತನಿಖೆ ಮಾಡಿ ಸತ್ಯಾಂಶ ಹೊರತರುವ ಕೆಲಸ ಮಾಡಬೇಕು. ನಾನು ಯಾವುದೇ ರೀತಿಯ ತನಿಖೆಗೂ ಸಿದ್ಧನಿದ್ದೇನೆ. ನನ್ನನ್ನು ಆರೋಪ ಮುಕ್ತರನ್ನಾಗಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆಯುತ್ತೇನೆ ಎಂದರು.

ಗೋಷ್ಠಿಯಲ್ಲಿ ಮುಖಂಡರಾದ ಎಂ. ರಾಜೇಶ್, ಸುನಿಲ್‌ಕುಮಾರ್, ಭರತ್‌ಕುಮಾರ್ ಹಾಜರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು