ಸರಗೂರು: ಮಳೆಗಾಳಿಗೆ ಮುಸುಕಿನ ಜೋಳದ ಗಿಡಗಳು ನೆಲಕ್ಕುರುಳಿದ ಘಟನೆ ತಾಲ್ಲೂಕಿನ ಬಿ.ಮಟಕೆರೆ ಗ್ರಾಮದಲ್ಲಿ ನಡೆದಿದೆ.
ಇದುವರೆಗೆ ಮಳೆಯಿಲ್ಲದೆ ಪರದಾಡಿದ ರೈತರು ಕೊಳವೆ ಬಾವಿಯ ನೀರಿನಲ್ಲಿ ಕೃಷಿ ಮಾಡಿದ್ದು, ಮಳೆ ಸುರಿದಿದ್ದರಿಂದ ಕೃಷಿಗೆ ಅನುಕೂಲವಾಗುತ್ತದೆ ಎಂದು ಖುಷಿಪಡುವ ಹೊತ್ತಿನಲ್ಲಿ ಸುರಿದ ಗಾಳಿ ಮಳೆಗೆ ಕೃಷಿಫಸಲುಗಳು ನಾಶವಾಗಿವೆ.
ಬಾಡಿಗ ಗ್ರಾಮದ ವಾಸಿ ಮಹಿದ್ದಿನ್ ಪಾಶ ಬಿನ್ ಲೇಟ್ ಮಹಮದ್ ಆಲಿ ಅವರಿಗೆ ಸೇರಿದ ಕಂದಲಿಕೆ ಹೋಬಳಿ ಬಿ ಮಟಕೆರೆ ಎಲ್ಲೆಯ ಸರ್ವೆ ನಂ 12/2 ರ 2 ಎಕರೆಯಲ್ಲಿ ಮುಸುಕಿನ ಜೋಳವನ್ನು ಬೆಳೆಯಲಾಗಿದ್ದು, ಗಿಡಗಳು ಹುಲುಸಾಗಿ ಬೆಳೆದು ಫಸಲು ಬಿಟ್ಟಿದ್ದವು. ಆದರೆ ಮಂಗಳವಾರ ಸಂಜೆ ಸಮಯದಲ್ಲಿ ಬಿದ್ದ ಮಳೆ ಹಾಗೂ ಜೋರಾದ ಗಾಳಿಗೆ ಮುಸುಕಿನ ಜೋಳದ ಗಿಡಗಳು ನೆಲಕ್ಕುರುಳಿದೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಈ ಸಂಬಂಧ ಸ್ಥಳಕ್ಕೆ ಕಂದಾಯ ಇಲಾಖಾಧಿಕಾರಿ ಪುಟ್ಟರಾಜು ಹಾಗೂ ಕೃಷಿ ಇಲಾಖೆಯ ಮಹೇಶ್ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಬೆಳೆನಾಶದ ಅಂದಾಜು ಮೊತ್ತ ಸುಮಾರು ಒಂದೂವರೆ ಲಕ್ಷ ಎಂದು ಹೇಳಲಾಗಿದೆ. ಸದ್ಯ ರೈತ ಮಹಿದ್ದಿನ್ ಪಾಶ ಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…