ಮೈಸೂರು: ಸ್ನೇಹಿತನೊಬ್ಬನಿಗೆ ಕೊಡಿಸಿದ್ದ ಸಾಲವನ್ನು ಆತ ಮರುಪಾವತಿ ಮಾಡದ ಕಾರಣ ವೀಡಿಯೋ ಮಾಡಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ದಂಪತಿಯನ್ನು ವಿಶ್ವ (34), ಸುಷ್ಮ (28) ಎಂದು ಗುರುತಿಸಲಾಗಿದೆ.
ದಂಪತಿ ಶಿವು ಎಂಬಾತನಿಗೆ ಬೇರೊಬ್ಬರಿಂದ 5 ಲಕ್ಷ ರೂ. ಸಾಲ ಕೊಡಿಸಿದ್ದರು. ಈ ಸಾಲವನ್ನು ಶಿವು ತೀರಿಸಿರಲಿಲ್ಲ. ಸಾಲಕೊಟ್ಟವರು ಹಣ ಕೊಡುವಂತೆ ವಿಶ್ವನನ್ನು ಕೇಳುತ್ತಿದ್ದರು, ಇಷ್ಟೇ ಅಲ್ಲದೇ, ಚೋರನಹಳ್ಳಿ ರಾಜಣ್ಣ ಎಂಬಾತನಿಗೆ ವಿಶ್ವ, ತನ್ನ ಚಿನ್ನಾಭರಣ ಕೊಟ್ಟಿದ್ದ. ಆ ಚಿನ್ನವನ್ನು ಮರಳಿ ಕೊಡದೆ ಆತ ಸತಾಯಿಸಿದ್ದ ಎಂದು ತಿಳಿದು ಬಂದಿದೆ.
ಇದೇ ಕಾರಣಕ್ಕೆ ದಂಪತಿ ಬೇಸತ್ತಿದ್ದರು. ಇದರಿಂದ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821