ನಂಜನಗೂಡು: ಕೆರೆಯಲ್ಲಿ ಕಲುಷಿತ ನೀರು ಕುಡಿದು ಐವತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೂಗಲೂರು ಗ್ರಾಮದಲ್ಲಿ ನಡೆದಿದೆ.
ಶಿರಾ ತಾಲ್ಲೂಕಿನ ಬಾಣಗೆರೆ ಗ್ರಾಮದ ರಂಗಸ್ವಾಮಿ ಎಂಬುವರು ನಾನೂರಕ್ಕೂ ಹೆಚ್ಚು ಕುರಿಗಳನ್ನು ಗ್ರಾಮದಲ್ಲಿ ಮೇಯಿಸುತ್ತಿದ್ದರು. ಇಂದು ಬೆಳಿಗ್ಗೆ ಕೂಗಲೂರು ಗ್ರಾಮದ ಕೆರೆಯಲ್ಲಿ ನೀರು ಕುಡಿಸಿಕೊಂಡು ಮೇಯಿಸಲು ಹೋದ ಸಂದರ್ಭದಲ್ಲಿ ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡು ಸಾವನ್ನಪ್ಪಿವೆ. ಕೆರೆಯ ನೀರಿನಲ್ಲಿ ಕ್ರಿಮಿನಾಶಕ ಮಿಶ್ರಣ ವಾಗಿರುವುದರಿಂದ ಕೆರೆ ನೀರು ಕಲುಷಿತವಾಗಿರಬಹುದು ಎಂಬುದು ಶಂಕೆ ವ್ಯಕ್ತವಾಗಿದೆ.
ಕುರಿಗಳನ್ನು ನಂಬಿಕೊಂಡು ಜೀವನ ಸಾಗಿಸುತ್ತೇವೆ. ಇಷ್ಟೊಂದು ಕುರಿಗಳು ಸಾವನ್ನಪ್ಪಿರುವುದರಿಂದ ನಮಗೆ ತುಂಬಲಾರದ ನಷ್ಟ ಉಂಟಾಗಿದೆ. ಅಧಿಕಾರಿಗಳು ಯಾರು ಕೂಡ ಬಂದು ನಮ್ಮ ಸಮಸ್ಯೆಯನ್ನು ಕೇಳಿಲ್ಲ. ಸರ್ಕಾರ ಕೂಡಲೇ ಪರಿಹಾರವನ್ನು ನೀಡಬೇಕು ಎಂದು ಕುರಿಗಾಹಿ ರಂಗಸ್ವಾಮಿ ಒತ್ತಾಯಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…