ನಂಜನಗೂಡು: ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತದಿಂದ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ಹುಲ್ಲಹಳ್ಳಿ ಗ್ರಾಮದ ಯೋಧ ನವೀನ್ ಶನಿವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರರ ಪುತ್ರ ವಿ.ನವೀನ್, ಬಿ ಎಸ್ ಎಫ್ ಇಂಡಿಯನ್ ಸೈನ್ಯದಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಮೃತಪಟ್ಟಿರೋ ವಿಷ ತಿಳಿದು ಯೋಧ ನವೀನ್ ಅವರ ಸ್ನೇಹಿತರು ಮತ್ತು ಬಂಧು-ಬಳಗ ದುಃಖದಲ್ಲಿ ಮುಳುಗಿದ್ದಾರೆ.
ಯೋಧ ನವೀನ್ ರವರ ಶವವನ್ನು ಭಾನುವಾರ ಮಧ್ಯಾಹ್ನ ನಂಜನಗೂಡಿಗೆ ತರಲಾಗುತ್ತಿದೆ. ನಂಜನಗೂಡಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.