ಮೈಸೂರು: ದೇಶದಲ್ಲಿ ವಿವಿಧ ಕ್ಷೇತ್ರಗಳ ಬಗ್ಗೆ ಅಧ್ಯಯನ ನಡೆಸಲು ಬಂದಿದ್ದ ಆಸ್ಟ್ರೇಲಿಯಾದ ಸಂಸದೀಯ ನಿಯೋಗದವರು ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯೊಂದಿಗೆ ಸಮಾಲೋಚಿಸಿದರು.
ಅಲ್ಲಿನ ಅಸೆಂಬ್ಲಿಯ ಸಭಾಧ್ಯಕ್ಷೆ ಮಿಚೆಲ್ ರಾಬರ್ಟ್ ಅಧ್ಯಕ್ಷತೆಯಲ್ಲಿ ವಿರೋಧ ಪಕ್ಷದ ನಾಯಕ ಡಾ.ಡೇವಿಡ್ ಹನಿ, ಶಾಸಕರಾದ ಡಾ.ಜಗದೀಶ್ ಕೃಷ್ಣನ್, ಕ್ಯಾಸಂಡ್ರ ರೋ ಮತ್ತು ಡೇವಿಡ್ ನಿಯೋಗದಲ್ಲಿದ್ದರು. ಜೆಎಸ್ಎಸ್ ಸಂಸ್ಥೆಗಳು ಆಸ್ಟ್ರೇಲಿಯಾದ ವಿವಿಧ ವಿಶ್ವವಿದ್ಯಾಲಯಗಳೊಂದಿಗೆ ಹೊಂದಿರುವ ಪರಸ್ಪರ ಒಡಂಬಡಿಕೆಗಳ ವಿವರಗಳನ್ನು ಅವರ ಗಮನಕ್ಕೆ ತರಲಾಯಿತು. ಅದಕ್ಕಾಗಿ ಅವರು ಸಂತಸ ವ್ಯಕ್ತಪಡಿಸಿದರು.
ಜೆಎಸ್ಎಸ್ ಸಂಸ್ಥೆಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಬೋಧಕರು ಅಲ್ಲಿಯ ವಿವಿಧ ವಿ.ವಿ.ಗಳೊಂದಿಗೆ ಶೈಕ್ಷಣಿಕ ವಿನಿಮಯದ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಭಾರತ ಆಸ್ಟ್ರೇಲಿಯಾ ನಡುವಿನ ಸಂಬಂಧ ಮತ್ತಷ್ಟು ವೃದ್ಧಿಯಾಗಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಡಾ.ಸುರೀಂದರ್ ಸಿಂಗ್, ಕೆಎಸ್ಒಯು ಕುಲಪತಿ ಪ್ರೊ.ಶರಣಪ್ಪ ಹಲಸೆ, ಪಶ್ಚಿಮ ಬಂಗಾಳದ ಐಎಎಸ್ ಅಧಿಕಾರಿ ಕೆಂಪಹೊನ್ನಯ್ಯ, ಕುಲಸಚಿವ ಡಾ.ಬಿ.ಮಂಜುನಾಥ್, ಪ್ರಾಂಶುಪಾಲ ಡಾ.ಎಚ್. ಬಸವನಗೌಡಪ್ಪ ಭಾಗವಹಿಸಿದ್ದರು.
ವ್ಯಕ್ತಿಯೊಬ್ಬರು ಕೋವಿಶೀಲ್ಡ್ ಲಸಿಕೆ ಪಡೆದ ಬಳಿಕ ತಮ್ಮ ಪುತ್ರಿ ಸಾವಿಗೀಡಾಗಿದ್ದಾಳೆ ಎಂದು ಆರೋಪಿಸಿ, ಆಸ್ಟ್ರಾಜೆನಿಕಾ ಕಂಪನಿ ವಿರುದ್ಧ ಕೋರ್ಟ್ ಮೆಟ್ಟಿಲೇರಲು…
ಜೂನ್ನಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದ ಅತಿಥ್ಯದಲ್ಲಿ ಪುರುಷರ ಟಿ20 ವಿಶ್ವಕಪ್ ನಡೆಯುತ್ತಿದೆ. ಈ ಟೂರ್ನಿಯ ಮೇಲೆ ಎಲ್ಲರ ಚಿತ್ತ…
ಖಲಿಸ್ತಾನಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಷಯವಾಗಿ ಕೆನಡಾದಲ್ಲಿ ಏನೆಲ್ಲ ನಡೆಯುತ್ತಿದ್ದರೂ ಅಲ್ಲಿನ ಆಂತರಿಕ ರಾಜಕೀಯವೇ ಕಾರಣವಾಗಿದ್ದು, ಅದಕ್ಕೂ ಭಾರತಕ್ಕೂ…
ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ…
ಚುನಾವಣೆ ಎಲ್ಲೆಡೆ ರಂಗೇರಿದೆ. ಒಂದೆಡೆ ನಾಯಕರ ವಾಗ್ದಾಳಿ ಇನ್ನೊಂದೆಡೆ ಪಕ್ಷಗಳ ನಡುವೆ ಬೇರೆ ಬೇರೆ ರೀತಿಯಲ್ಲಿ ವಾಗ್ಧಾಳಿ ನಡೆಯುತ್ತಲೇ ಇದೆ.…
ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ರೋಡ್ ಶೋ ನಡೆಸಿದ ಮಾಜಿ ಸಚಿವ ಸಿ.ಟಿ ರವಿ, ಮೋದಿ ಪ್ರಧಾನಿಯಾದ…