News Karnataka Kannada
Monday, April 29 2024
ಮೈಸೂರು

ಮೈಸೂರು ಭಾಗದ 12 ರೈಲು ನಿಲ್ದಾಣಗಳ ಅಭಿವೃದ್ಧಿ

ನೈರುತ್ಯ ರೈಲ್ವೆ ಮೈಸೂರು ವಿಭಾಗದ 12 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಾಲನೆ, 12  ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಉದ್ಘಾಟನೆಯ ಶಂಕುಸ್ಥಾಪನೆ ಕಾರ್ಯಕ್ರಮ ಫೆ.26ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ನೆರವೇರಿಸಲಿದ್ದಾರೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ತಿಳಿಸಿದರು.
Photo Credit : By Author

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ 12 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಾಲನೆ, 12  ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಉದ್ಘಾಟನೆಯ ಶಂಕುಸ್ಥಾಪನೆ ಕಾರ್ಯಕ್ರಮ ಫೆ.26ರಂದು ಮಧ್ಯಾಹ್ನ 12.30ಕ್ಕೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ನೆರವೇರಿಸಲಿದ್ದಾರೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಶಿಲ್ಪಿ ಅಗರ್ವಾಲ್ ತಿಳಿಸಿದರು.

ದೇಶದಾದ್ಯಂತ 525 ರೈಲು ನಿಲ್ದಾಣಗಳು ಮತ್ತು 1500 ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಅಭಿವೃದ್ಧಿಗೆ  ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಲಾಗುತ್ತಿದೆ. ಇದರಲ್ಲಿ ಮೈಸೂರು ವಿಭಾಗದ 367.86ಕೋಟಿ ಮೊತ್ತದ ಯೋಜನೆಗಳು ಒಳಗೊಂಡಿವೆ. ಆಯಾ ನಿಲ್ದಾಣಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು, ಆ ಭಾಗದ ಸಂಸದರು ಹಾಗೂ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿದೆ ಎಂದರು.

ಎಬಿಎಸ್‌ಎಸ್ (ಅಮೃತ್ ಭಾರತ್ ಸ್ಟೇಷನ್ ಯೋಜನೆ) ಅಡಿ 297 ಕೋಟಿ ವೆಚ್ಚದಲ್ಲಿ 12 ನಿಲ್ದಾಣಗಳನ್ನು  ಅಭಿವೃದ್ಧಿಪಡಿಸಲಾಗುವುದು. ಆಧುನಿಕ ಸೌಲಭ್ಯ ಒದಗಿಸಲಾಗುವುದು. ಪ್ರವೇಶಗಳ ಸುಧಾರಣೆ, ಶೌಚಾಲಯ ಸೌಲಭ್ಯ, ಲಿಫ್ಟ್, ಎಸ್ಕಲೇಟರ್ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ, ಉಚಿತ ವೈಫೈ ಸೌಲಭ್ಯ ಕಲ್ಪಿಸುವುದು, ಒಂದು ನಿಲ್ದಾಣ ಒಂದು ಉತ್ಪನ್ನದಂತಹ ಉಪಕ್ರಮಗಳ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವುದು, ಪ್ರಯಾಣಿಕರಿಗೆ ಮಾಹಿತಿ ವ್ಯವಸ್ಥೆ ಹೆಚ್ಚಿಸುವುದು, ವಿಶ್ರಾಂತಿ ಕೊಠಡಿಗಳ ಸ್ಥಾಪನೆ, ಸಭೆಗಳಿಗೆ ಸ್ಥಳ ನಿಗದಿ, ಲ್ಯಾಂಡ್‌ ಸ್ಕೇಪಿಂಗ್ ಮೊದಲಾದ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಕೆಲವೆಡೆ, ಕಾಮಗಾರಿ ಈಗಾಗಲೇ ಶುರುವಾಗಿದೆ. 9 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದರು.

ಈ ನಿಲ್ದಾಣಗಳಲ್ಲಿ ಅಂಗವಿಕಲರಿಗೆ ರ್‍ಯಾಂಪ್ ಮೊದಲಾದ ವ್ಯವಸ್ಥೆ ಒದಗಿಸಲಾಗುವುದು. ಜಲ್ಲಿಕಲ್ಲು ಇಲ್ಲದ (ನಿಲುಭಾರ) ಹಳಿಗಳನ್ನು ಪರಿಚಯಿಸುವುದು. ಅಗತ್ಯವಿರುವಲ್ಲಿ ಬಹುಮಹಡಿ ಪ್ಲಾಜಾ ನಿರ್ಮಾಣಕ್ಕೂ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

63.94 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 8 ರೈಲ್ವೆ ಕೆಳಸೇತುವೆ ಹಾಗೂ 4 ರಸ್ತೆ ಮೇಲ್ಸೇತುವೆಗಳನ್ನು ಲೋಕಾರ್ಪಣೆ  ಮಾಡಲಾಗುವುದು. ಸುಬ್ರಹ್ಮಣ್ಯ ರೋಡ್ ಯಡೆಮಂಗಲ ನಡುವಿನಲ್ಲಿ ಬಜಕೆರೆ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ (6.30 ಕೋಟಿ ವೆಚ್ಚ) ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು. ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ವಿಜಯಾ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು