ನಂಜನಗೂಡು: ಎರಡನೇ ಆಷಾಢ ಶುಕ್ರವಾರದ ಹಿನ್ನಲೆಯಲ್ಲಿ ನಂಜನಗೂಡು ನಗರದ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.
ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯ ಕಪಿಲಾ ನದಿ ದಡದಲ್ಲಿರುವ ಅಧಿದೇವತೆ ಚಾಮುಂಡೇಶ್ವರಿ ಸನ್ನಧಿಯಲ್ಲಿ ವಿಶೇಷ ಪೂಜೆ ಪುರಸ್ಕಾರ ಮಾಡಲಾಯಿತು.
ಆಷಾಢದ ಎರಡನೇ ಶುಕ್ರವಾರದಲ್ಲಿ ನಾಗಲಕ್ಷ್ಮೀ ಅಲಂಕಾರ. ಲಕ್ಷ್ಮೀ, ಶಕ್ತಿ ದೇವತೆಗಳ ಆರಾಧನೆ ಮಾಡಿ, ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೇರವೇರಿಸಲಾಗುತ್ತಿದೆ. ಆಷಾಡ ಮಾಸದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ.
ಚಾಮುಂಡಿಗೆ ಮಹಾ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಲಾಯಿತು. ತಳಿರು ತೋರಣಗಳಿಂದ ದೇವಾಲಯವನ್ನು ಸಿಂಗಾರ ಮಾಡಲಾಗಿತ್ತು. ಭಕ್ತರಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.