ಮೈಸೂರು: ಎಚ್.ವಿ.ರಾಜೀವ್ ಸ್ನೇಹ ಬಳಗ ಹಾಗೂ ಕೃಷ್ಣರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಕ್ಷೇತ್ರದ ಮಾಜಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಜೆ.ಎನ್ ನೇತೃತ್ವದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತ್ರಿವರ್ಣ ಧ್ವಜ ವಿತರಿಸಲಾಯಿತು.
ಕುವೆಂಪುನಗರದಲ್ಲಿರುವ ನಮನ ಉದ್ಯಾನವನದಲ್ಲಿ ಸಸಿ ನೆಟ್ಟು ಉದ್ಯಾನವನಕ್ಕೆ ಬಂದ ವಾಯುವಿಹಾರಿಗಳಿಗೆ ಹಾಗೂ ಕುವೆಂಪು ನಗರದ ಸುತ್ತಮುತ್ತಲ ನಿವಾಸಿಗಳಿಗೆ ತಮ್ಮ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜ ಅಳವಡಿಸಲು ಧ್ವಜವನ್ನು ಉಚಿತವಾಗಿ ನೀಡಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೆಂದು ಮನವಿ ಮಾಡಿದರು.
ನಂತರ ಮಾತನಾಡಿದ ರಾಜೇಶ್.ಜೆ.ಎನ್, ಪ್ರತಿ ಮನೆಯ ಮೇಲೂ ರಾಷ್ಟ್ರ ಧ್ವಜ ಹಾರಾಡುವ ಮೂಲಕ ಈ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಮೆರುಗು ನೀಡೋಣ. ಇದೊಂದು ದೇಶದ ಬಹುದೊಡ್ಡ ಹಬ್ಬ ಅದನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು.
ಈ ಸಂದರ್ಭ ಹೇಮಂತ್, ನಾಗೇಶ್, ರಾಘವೇಂದ್ರ, ಗೌರವ ಶರ್ಮ, ಕುಮಾರ್, ಮಧು, ಚೇತನ್, ಕಿರಣ್ ಮತ್ತಿತರರು ಭಾಗವಹಿಸಿದ್ದರು.