ನಂಜನಗೂಡು: ದೇಶದಲ್ಲಿ ಜನ ಸಂಖ್ಯೆ ಅನುಗುಣವಾಗಿ ಮೀಸಲಾತಿ ಇಲ್ಲ ಮೀಸಲಾತಿ ವಿರುದ್ಧ ಆರ್ ಎಸ್ ಎಸ್ ನವರು ಪ್ರತಿಭಟಿಸಿದ್ದರು. ಬಿಜೆಪಿ ಮತ್ತು ಆರ್ ಎಸ್ ಎಸ್ ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿವೆ ಎಂದು ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಂಜನಗೂಡು ಪಟ್ಟಣದ ಮಹದೇಶ್ವರ ಯಾತ್ರಿ ಭವನದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗಗಳ ಸಭೆಯಲ್ಲಿ ಹಾಗೂ ಚಾಮರಾಜ ನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿ, ಸಣ್ಣಪುಟ್ಟ ಜಾತಿಗಳನ್ನು ಗುರುತಿಸಬೇಕು. ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿ ಗಣತಿ ವರದಿಯನ್ನು ಪ್ರಕಟ ಮಾಡಲಾಗುತ್ತದೆ. ಜಾತಿ ಗಣತಿ ಆಧಾರವಾಗಿರುತ್ತದೆ ಜಾರಿಗೆ ತರಬೇಕು. ಬಿಜೆಪಿಯವರು ಹಿಂದುಳಿದವರ ಪರವಾಗಿ ದಲಿತರ ಪರವಾಗಿ ಯಾವತ್ತೂ ಕೆಲಸ ಮಾಡುವುದಿಲ್ಲ. ಎಲ್ಲರ ಪರವಾಗಿ ಕಾಂಗ್ರೆಸ್ ಪಕ್ಷವಿದೆ. ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಚುನಾವಣೆಯಲ್ಲಿ ಬೆಂಬಲಿಸಿ ಎಂದರು.
ಸಾಮಾಜಿಕ ಸಿದ್ಧಾಂತದ ಅಡಿಯಲ್ಲಿ ಕಾಂಗ್ರೆಸ್ ಪಕ್ಷದ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿಯವರು ಸಂವಿಧಾನವನ್ನು ಬದಲಾವಣೆ ಮಾಡುತ್ತಿವೆ ಎಂದು ಹೇಳುತ್ತಿದ್ದಾರೆ ನಾವು ಅವರನ್ನೇ ಬದಲಾಯಿಸಬೇಕು. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಉಸ್ತುವಾರಿ ಶ್ರೀಕಂಠ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಿಧಾನ ಪರಿಷತ್ ಸದಸ್ಯ ವೇಣುಗೋಪಾಲ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಗಿರೀಶ್, ನಂದಕುಮಾರ್, ಕೆ.ಮಾರುತಿ ಬ್ಲಾಕ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಶ್ರೀಕಂಠ ನಾಯಕ, ಶಂಕರ್ ಸೇರಿದಂತೆ ಹಲವರು ಭಾಗವಹಿಸಿದ್ದರು.