ನಂಜನಗೂಡು: ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಲಕ್ಷಾಂತರ ರೂ. ತೆಂಗಿನಕಾಯಿಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಗ್ರಾಮದ ಬಸವರಾಜು ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಇಂದು ಗುರುವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಬೆಂಕಿ ಒತ್ತಿಕೊಂಡು ಉರಿದ ಪರಿಣಾಮ ಸುಮಾರು 3 ಸಾವಿರಕ್ಕೂ ಹೆಚ್ಚು ತೆಂಗಿನ ಕಾಯಿಗಳು, ಡ್ರಿಪ್ ಪೈಪ್ ಗಳು ಸೇರಿದಂತೆ, ತೋಟದ ಮನೆಯ ಬಾಗಿಲು, ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿವೆ.
ಇನ್ನು ಈ ಘಟನೆಯಿಂದ ಲಕ್ಷಾಂತರ ರೂ. ನಷ್ಟವಾಗಿದ್ದು, ಪರಿಹಾರಕ್ಕಾಗಿ ಬಸವರಾಜು ಒತ್ತಾಯಿಸಿದ್ದಾರೆ.
ಈ ಸಂಬಂಧ ಚೆಸ್ಕಾಂ ಅಧಿಕಾರಿಗಳಿಗೆ ಮಾಹಿತಿಯನ್ನು ತಿಳಿಸಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪರಿಹಾರದ ಭರವಸೆಯನ್ನು ನೀಡಿದ್ದಾರೆ.