News Karnataka Kannada
Saturday, April 27 2024
ಮೈಸೂರು

ಸಂವಿಧಾನದ ವಿರೋಧಿಗಳು ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಿ- ಯತೀಂದ್ರ ಸಿದ್ದರಾಮಯ್ಯ ಕರೆ

ಯತಿಂದ್ರ ಸಿದ್ದರಾಮಯ್ಯ
Photo Credit : News Kannada

ತಾಂಡವಪುರ: ದೇಶದ ಸಮಾನತೆಗೆ ಸಂವಿಧಾನವನ್ನು ರಚನೆ ಮಾಡಿದಂತಹ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಸಂವಿಧಾನವನ್ನು ತಿದ್ದುಪಡಿ ಮಾಡುವ ಹಾಗೂ ವಿರೋಧಿಸುವವರನ್ನು ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಿ ಎಂದು ಶಾಸಕ ಡಾಕ್ಟರ್ ಯತಿಂದ್ರ ಸಿದ್ದರಾಮಯ್ಯನವರು ಜೈ ಭೀಮ್ ಯುವಕರ ಸಂಘದ ಮುಖಂಡರುಗಳಿಗೆ ಕರೆ ನೀಡಿದರು.

ಅವರು ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಗಡೂರು ಗ್ರಾಮದಲ್ಲಿ ಸಂವಿಧಾನ ದಿನದ ಅಂಗವಾಗಿ ಗ್ರಾಮದ ಜೈ ಭೀಮ್ ಯುವಕರ ಸಂಘದವರು ಏರ್ಪಡಿಸಿದ್ದ ಕ್ರಿಕೆಟ್ ಟೂರ್ನಮೆಂಟ್ ಆಟದಲ್ಲಿ ಜಯಗಳಿಸಿದ ತಂಡಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಸಂವಿಧಾನದ ದಿನದ ಅಂಗವಾಗಿ ಗ್ರಾಮದ ಯುವಕರು ಇಂತಹ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ ಮಾಡಿ ಸುತ್ತಮುತ್ತಲ ಗ್ರಾಮಗಳ ಯುವಕರು ಬಾಂಧವ್ಯ ಬೆಸೆಯಲು ಈ ಆಟವು ಪ್ರಮುಖ ಪಾತ್ರ ವಹಿಸುವುದು, ಯುವಕರ ಈ ಪ್ರಯತ್ನಕ್ಕೆ ಶಾಸಕ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರು ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲದೆ ಕ್ರೀಡೆ ಯುವಕರಿಗೆ ಬಹಳ ಮುಖ್ಯವಾಗಿದ್ದು ದೇಹ ಆರೋಗ್ಯ ಹಾಗೂ ಉತ್ತಮ ಸ್ನೇಹ ಬಾಂಧವ್ಯ ಬೆಸೆಯುವ ಆಟವಾಗಿದ್ದು ಆಟದಲ್ಲಿ ಗೆದ್ದವರು ಇಗ್ಗದೆ, ಸೋತವರು ಕುಗ್ಗದೆ ಎಲ್ಲರೂ ಸಮಾನಚಿತವಾಗಿ ಕಾಣಬೇಕು ಎಂದು ಕ್ರೀಡಾಪಟುಗಳಿಗೆ ಸಲಹೆ ನೀಡಿದರು.

ಸಂವಿಧಾನದ ಅಡಿಯಲ್ಲಿ ಅಧಿಕಾರಕ್ಕೆ ಬಂದ ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನವನ್ನು ತಿದ್ದುಪಡಿ ಮಾಡುವ ಉನ್ನಾರ ನಡೆಯುತ್ತಿರುವುದು ನಮ್ಮೆಲ್ಲರಿಗೂ ಗೊತ್ತಿರುವ ಅಂತಹ ವಿಚಾರ ಆದ್ದರಿಂದ ಸಂವಿಧಾನವನ್ನು ತಿದ್ದುಪಡಿ ಮಾಡುವ ಹಾಗೂ ವಿರೋಧಿಸುವ ಪಟ್ಟ ಭದ್ರ ಹಿತ ಶಕ್ತಿಗಳು ಅಧಿಕಾರಕ್ಕೆ ಬಾರದಂತೆ ನೋಡಿಕೊಳ್ಳಬೇಕು ವೆಂದು ಜೈ ಭೀಮ್ ಯುವಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಆರ್ ಮಹದೇವು ಗ್ರಾಮ ಪಂಚಾಯತಿ ಅಧ್ಯಕ್ಷ ಸರಸ್ವತಿ ಗಾರ್ಡನ್ ಮಹೇಶ್ ಕಾಂಗ್ರೆಸ್ ಮುಖಂಡರಾದ ಶಾಂತಮ್ಮ ಬುಲೆಟ್ ಮಹಾದೇವ ಶಿವರಾಮು ಬಾಲರಾಜು ಪುಟ್ಟಣ್ಣ ರಾಜಣ್ಣ ನಾಗರಾಜು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದ ಗುರು ಮಲ್ಲೇಶ ಚಿನ್ನಂಬಳ್ಳಿ ರಾಜು ಹಾಗೂ ಗೌತಮ್ ಬುದ್ಧ ಯುವಕ ಯುವಕರ ಸಂಘ ಜೈ ಭೀಮ್ ಯುವಕರ ಸಂಘದವರು ಹಾಗೂ ಸುತ್ತಮುತ್ತಲ ಗ್ರಾಮಗಳ ಕ್ರೀಡಾ ಅಭಿಮಾನಿಗಳು ಮುಖಂಡರುಗಳು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು