ಮೈಸೂರು, ಜು. 22: ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಶುಕ್ರವಾರ ಕುಟುಂಬ ಸಮೇತರಾಗಿ ಈಶ್ವರಪ್ಪ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.ಈ ವೇಳೆ ಈಶ್ವರಪ್ಪರವರ ಜೊತೆ ಪತ್ನಿ ಜಯಲಕ್ಷ್ಮೀ ಈಶ್ವರಪ್ಪ, ಪುತ್ರ ಕೆ.ಈ. ಕಾಂತೇಶ್ ಮತ್ತು ಕುಟುಂಬ ಸದಸ್ಯರು ಇದ್ದರು.
ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಉಡುಪಿ ಟೌನ್ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ಗೆ ತನಿಖಾ ವರದಿ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿ ಈಶ್ವರಪ್ಪ ವಿರುದ್ಧ ಪೊಲೀಸರು ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಈಶ್ವರಪ್ಪ, ‘ಪ್ರಕರಣದಲ್ಲಿ ನನ್ನ ಹೆಸರು ಕೇಳಿ ಬಂದ ಕಾರಣ ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ನೀಡಿದ್ದೆ. ಈಗ ಆ ಮುಜಗರ ನಿವಾರಣೆಯಾಗಿದೆ. ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿದ್ದರೂ ಕಾಂಗ್ರೆಸ್ನವರು ಟೀಕಿಸುತ್ತಿದ್ದಾರೆ. ಇದರಿಂದ ನನಗೆ ಬೇಸರವಿದೆ” ಎಂದರು.
ಇಂದು ಆಷಾಡ ಕೊನೆ ಶುಕ್ರವಾರದ ನಿಮಿತ್ತ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನಾಶೀರ್ವಾದ ಪಡೆದ ಶುಭ ಸಮಯ. pic.twitter.com/uqhW5SLdro
— K S Eshwarappa (@ikseshwarappa) July 22, 2022