News Karnataka Kannada
Tuesday, April 30 2024
ಮೈಸೂರು

ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
Photo Credit : News Kannada

ನಂಜನಗೂಡು: ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಖಾಯಂ ಉದ್ಯೋಗ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

ನಂಜನಗೂಡು ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮಾನ್ ಸಕ್ಕರೆ ಕಾರ್ಖಾನೆ ಮುಂಭಾಗದಲ್ಲಿ ಜಮಾಯಿಸಿದ ನೂರಾರು ಸಂಖ್ಯೆಯ ರೈತರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಉದ್ಯೋಗವನ್ನು ನೀಡುತ್ತೇವೆ ಎಂದು ರೈತರಿಂದ ಭೂಮಿಯನ್ನು ಖರೀದಿ ಮಾಡಿ ಕಾರ್ಖಾನೆಯನ್ನು ನಡೆಸುತ್ತಿದ್ದಾರೆ. ಆದರೆ ಇಲ್ಲಿಯ ತನಕ ಯಾವುದೇ ಉದ್ಯೋಗವನ್ನು ನೀಡದೆ ರೈತರಿಗೆ ವಂಚನೆ ಮಾಡಿದ್ದಾರೆ. ಕೂಡಲೇ ರೈತರ ಮಕ್ಕಳಿಗೆ ಕಾಯಂ ಉದ್ಯೋಗ ನೀಡುವಂತೆ ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಈ ಕೂಡಲೇ ರೈತರ ಮಕ್ಕಳಿಗೆ ಕಾಯಮ್ಮ ಉದ್ಯೋಗ ನೀಡಬೇಕು ಇಲ್ಲದಿದ್ದಲ್ಲಿ ಅನಿರ್ಧಿಷ್ಟಾವಧಿ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಜನಾಂದೋಲನಗಳ ಮಹಾಮೈತ್ರಿಯ ಜಿಲ್ಲಾ ಸಂಚಾಲಕ ಉಗ್ರ ನರಸಿಂಹೇಗೌಡ, AIKKMS ನ ಜಿಲ್ಲಾ ಸಂಚಾಲಕ ಬಸವರಾಜು, ಆಕಾಶ್ ಕುಮಾರ್, ರೈತರಾದ ನಂಜುಂಡ, ಮಹೇಶ್. ಕೆ. ಪುನೀತ್, ರಾಜು, ಶ್ರೀಕಂಠ, ಮಂಜುನಾಥ್, ಬಸವಣ್ಣ ನಾಯ್ಕ, ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು