ನಂಜನಗೂಡು: ನಂಜನಗೂಡು ಪಟ್ಟಣದಿಂದ ಕೇವಲ 5 ಕಿಲೋ ಮೀಟರ್ ದೂರ ಇರುವ ಹಂಡುವಿನಹಳ್ಳಿ ಗ್ರಾಮದ ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ಇಂದು ಗುರುವಾರ ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
50ಕ್ಕೂ ಹೆಚ್ಚು ಎಕರೆಗೆ ಬೆಂಕಿ ವ್ಯಾಪಿಸಿದೆ. 150 ಎಕರೆ ಪ್ರದೇಶದಲ್ಲಿರುವ ಕುರುಚಲು ಅರಣ್ಯ ಪ್ರದೇಶ ಇದಾಗಿದ್ದು, ಅಕ್ರಮವಾಗಿ ಮಣ್ಣು ಸಾಗಾಟ ಮಾಡುವ ಕಿಡಿಗೇಡಿಗಳಿಂದ ಕೃತ್ಯ ನಡೆದಿರಬಹುದೆಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಈ ಪ್ರದೇಶದ ವ್ಯಾಪ್ತಿಯಲ್ಲಿ ನಿರಂತರವಾಗಿ ಅಕ್ರಮವಾಗಿ ಮಣ್ಣನ್ನು ನಂಜನಗೂಡು, ಮೈಸೂರು ಸೇರಿದಂತೆ ಕೇರಳ ರಾಜ್ಯಕ್ಕೆ ಸಾಗಾಟವಾಗುತ್ತಿರುವ ಬಗ್ಗೆ ದೂರುಗಳಿವೆ. ಈ ಕುರುಚಲು ಅರಣ್ಯ ಪ್ರದೇಶದಲ್ಲಿ ಅತಿ ಹೆಚ್ಚು ಜಿಂಕೆ ಮತ್ತು ನವಿಲುಗಳ ತಾಣ ಎಂದು ಪ್ರಸಿದ್ಧಿಯಾಗಿದೆ.
ಬೆಂಕಿ ನಂದಿಸುವಲ್ಲಿ ನಂಜನಗೂಡು ಸಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷಿಸಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಕಿ ವ್ಯಾಪಿಸುತ್ತಿದ್ದರೂ ಯಾವುದೇ ಅಧಿಕಾರಿಗಳು ಅಥವಾ ಸಿಬ್ಬಂದಿಗಳು ಯತ್ನಿಸಿಲ್ಲವೆಂದು ಹಂಡುವಿನಹಳ್ಳಿ, ಬ್ಯಾಳಾರು ಮತ್ತು ಹೆಗ್ಗಡಹಳ್ಳಿ ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.