ಮೈಸೂರು: ಮಹಾಪರಿನಿರ್ವಾಣ ದಿನದ ಅಂಗವಾಗಿ ಮಂಗಳವಾರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಲಾಯಿತು.
ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟೌನ್ ಹಾಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರ ಮತ್ತು ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಮೇಯರ್ ಶಿವಕುಮಾರ್ ಅವರು, “ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಿಳಾ ಹಕ್ಕುಗಳು, ಸಮಾನತೆ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ಶ್ರಮಿಸಿದ ಸಮಾಜ ಸುಧಾರಕರಾಗಿದ್ದಾರೆ. ಅಂಬೇಡ್ಕರ್ ಅವರು ಹಾಕಿಕೊಟ್ಟ ಸಮಾನತೆಯ ಹಾದಿಯಲ್ಲಿ ಸಾಗುವ ಮೂಲಕ ನಾವು ಮಹಾನ್ ವ್ಯಕ್ತಿತ್ವವನ್ನು ಗೌರವಿಸಬೇಕು..
ಶಾಸಕ ಎಸ್.ಎ.ರಾಮದಾಸ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಶಿವಣ್ಣ, ಚಾಮರಾಜನಗರದ ಮಾಜಿ ಸಂಸದ ಶಿವಣ್ಣ, ಅಪ್ಪರ್ವ ಶಿವಣ್ಣ, ಕಾಂಗ್ರೆಸ್ ಮುಖಂಡ ಪಿ.ರಾಜು, ಉಪಮೇಯರ್ ರೂಪಾ ಜಿ.ಯೋಗೇಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ ಮತ್ತಿತರರು ಹಾಜರಿದ್ದರು.