Categories: ಮೈಸೂರು

ಮೈಸೂರಿನಲ್ಲಿ ಬಾಲಕನ ಅಪಹರಿಸಿದ್ದ ನಾಲ್ವರ  ಬಂಧನ

ಮೈಸೂರು: ಮೈಸೂರನ್ನು ಬೆಚ್ಚಿಬೀಳಿಸಿದ್ದ ವೈದ್ಯದಂಪತಿಯ ಪುತ್ರನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಅಪಹರಣಕಾರರನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಎರಡು ಕಾರುಗಳು ಮತ್ತು ಐದು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ನು ಅಪಹರಣದ ಕುರಿತಂತೆ  ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ  ಮಾಹಿತಿ ನೀಡಿದ್ದು, ಅಪಹರಣ ಕೃತ್ಯದಲ್ಲಿ ಐವರು ಭಾಗಿಯಾಗಿದ್ದು, ನಾಲ್ವರನ್ನು ಬಂಧಿಸಿದ್ದು, ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳು ಮೈಸೂರು ನಗರ, ಗ್ರಾಮಾಂತರ ಮತ್ತು ಬೆಂಗಳೂರು ಭಾಗದವರಾಗಿದ್ದಾರೆ. ಎಲ್ಲರೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಓದಿಕೊಂಡಿರುವ 20 ರಿಂದ 25 ವರ್ಷದ ವಯೋಮಾನದರಾಗಿದ್ದಾರೆ.

ವೈಜ್ಞಾನಿಕ ಸಾಕ್ಷಿಗಳ ಆಧಾರದ ಮೇಲೆ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪ್ರಕರಣವನ್ನು ಭೇದಿಸಿ ವೈದ್ಯ ದಂಪತಿಗಳ ಮಗನನ್ನು ರಕ್ಷಿಸಿ, 18ಗಂಟೆಗಳ ಅವಧಿಯಲ್ಲಿ ಅಪಹರಿಸಿದ್ದ 4 ಜನ ಆರೋಪಿಗಳನ್ನು ವಿರಾಜಪೇಟೆಯಲ್ಲಿ ಬಂಧಿಸಿ, ಕೃತ್ಯಕ್ಕೆ ಬಳಸಿದ್ದ 5ಮೊಬೈಲ್ ಫೋನ್‌ಗಳು ಮತ್ತು 2 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಹಣ ಅವಶ್ಯಕತೆ ಇದ್ದ ಕಾರಣ ಈ ಕೆಲಸ ಮಾಡಲಾಗಿದೆ ಎಂದು ಆರೋಪಿಗಳು ಹೇಳಿರುವುದಾಗಿ ತಿಳಿಸಿದ ಅವರು ಇದರ ಹೊರತಾಗಿ ಬೇರೆ ಕಾರಣಗಳೇನಾದರೂ ಇವೆಯಾ ಎಂಬ ಉದ್ದೇಶದಿಂದ ತನಿಖೆಯನ್ನು ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಇಬ್ಬರು ಅದ್ವೈತ್ ಡೇ ಕೇರ್ ನಡೆಸುತ್ತಿದ್ದರು. ಇನ್ನಿಬ್ಬರು  ಚಾಲಕರಾಗಿದ್ದಾರೆ. ಅಲ್ಲದೇ, ಪ್ರಮುಖ ಆರೋಪಿಯೊಬ್ಬ ಬಾಲಕನ ತಾತನ ಆರೈಕೆ ಮಾಡುವ ಕೆಲಸವನ್ನು ಕೆಲವು ದಿನಗಳ ಕಾಲ ಮಾಡಿದ್ದನು. ಬಾಲಕನ ಕುಟುಂಬದವರಿಗೆ ಗೊತ್ತಿರುವವರೇ ಆಗಿದ್ದು, ಹಲವು ದಿನಗಳ ಹಿಂದೆಯೇ ಬಾಲಕನ ಅಪಹರಣಕ್ಕೆ ಪ್ಲಾನ್ ಮಾಡಲಾಗಿತ್ತು. ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬುದು ಇಲ್ಲಿಯವರೆಗಿನ ತನಿಖೆಯಿಂದ ತಿಳಿದು ಬಂದಿದ್ದು, ಇನ್ನು ತನಿಖೆ ನಡೆಯುತ್ತಿದೆ ಎಂದರು.

ಕುವೆಂಪುನಗರ ಠಾಣಾ ಸರಹದ್ದಿನ ಮುಡಾ ಲೇಔಟ್ ರಸ್ತೆಯಲ್ಲಿ ವೈದ್ಯ ದಂಪತಿಯ 12 ವರ್ಷದ ಮಗ ಸೈಕಲ್ ಓಡಿಸಿಕೊಂಡು ಹೋಗುತ್ತಿರುವ ಸಮಯದಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಬಂದು ಅಪಹರಣ ಮಾಡಿಕೊಂಡು ಹೋಗಿದ್ದು,  ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿಕೊಂಡು ತಕ್ಷಣ ಪ್ರತ್ಯಕ್ಷದರ್ಶಿಗಳನ್ನು ಮತ್ತು ಮನೆಯವರೊಂದಿಗೆ ಚರ್ಚಿಸಿ ಡಿಸಿಪಿ ಪ್ರದೀಪ್ ಗುಂಟಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಯಿತು.

ಕಾರ್ಯಾಚರಣೆ ಕೈಗೊಂಡ ಕೆಲವೇ ಗಂಟೆಯಲ್ಲಿ ಬಾಲಕನನ್ನು ರಕ್ಷಣೆ ಮಾಡಲಾಯಿತು. ತನಿಖೆ ಇನ್ನು ನಡೆಯುತ್ತಿರುವುದರಿಂದ ಕಾರ್ಯಾಚರಣೆ ಸಂಬಂಧ ಮತ್ತು ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು.

ಹೋಮ್ ನರ್ಸಿಂಗ್ ಕೇರ್ ಸೇವೆ ಒದಗಿಸುವ ಕಂಪನಿಗಳು ಸಾಕಷ್ಟಿವೆ. ಹೋಮ್ ನರ್ಸಿಂಗ್ ಸೇವೆ ಮತ್ತು ಚಾಲಕನ ಹುದ್ದೆಗೆ  ನೇಮಿಸಿಕೊಳ್ಳುವ ಮುನ್ನ ಪೊಲೀಸರಿಂದ ಅವರ ಹಿನ್ನೆಲೆ ಪರಿಶೀಲಿಸುವುದನ್ನು ಕಡ್ಡಾಯ ಮಾಡಬೇಕಿದೆ. ಯಾಕೆಂದರೆ ಪ್ರತಿಯೊಬ್ಬರ ಹಿನ್ನೆಲೆಯೂ ಗೊತ್ತಿರುವುದಿಲ್ಲ. ಏಕಾಏಕಿ ಅವರನ್ನು ಇಂತಹ ಕೆಲಸಕ್ಕೆ ಸೇರಿಸಿಕೊಂಡರೆ ಮನೆಯ ಒಳ ಮತ್ತು ಹೊರವನ್ನು ತಿಳಿದುಕೊಂಡು ಈ ರೀತಿಯ ಕೆಲಸಕ್ಕೆ ಮುಂದಾಗುತ್ತಾರೆ. ಹಾಗಾಗಿ, ಸಾರ್ವಜನಿಕರು ಇಂತಹ ಕೆಲಸಗಳಿಗೆ ಯಾರನ್ನೆ ನೇಮಿಸಿಕೊಳ್ಳಬೇಕಾದರೂ ಅವರ ಹಿನ್ನೆಲೆ ಚೆಕ್ ಮಾಡಿಸಬೇಕು ಎಂದು ಚಂದ್ರಗುಪ್ತ ಸಲಹೆ ನೀಡಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಅವರ  ಮಾರ್ಗದರ್ಶನದಲ್ಲಿ, ನರಸಿಂಹರಾಜ ವಿಭಾಗದ  ಎಸಿಪಿ ಶಿವಶಂಕರ್ ಮತ್ತು ಸಿಸಿಬಿ ಘಟಕದ ಎಸಿಪಿ ಅಶ್ವತ್ ನಾರಾಯಣ್, ಕೃಷ್ಣರಾಜ ವಿಭಾಗದ ಎಸಿಪಿ ಪೂರ್ಣಚಂದ್ರ ತೇಜಸ್ವಿ ರವರ ನೇತೃತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ  ಸಂತೋಷ್, ರಾಜು ಜಿ.ಸಿ, ಶೇಖರ್, ಅಜರುದ್ದಿನ್, ಪ್ರಕಾಶ್, ರವೀಂದ್ರ, ಷಣ್ಮುಗ ವರ್ಮ, ಪಿಎಸ್‌ಐಗಳಾದ ಕು.ರಾಧ ಎಂ, ಗೋಪಾಲ್ ಸೇರಿದಂತೆ ಎಲ್ಲ ಸಿಬ್ಬಂದಿಯೂ ಒಂದಲ್ಲ ಒಂದು ರೀತಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿ ಪ್ರದೀಪ್ ಗುಂಟಿ ಇದ್ದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago