News Karnataka Kannada
Thursday, May 02 2024
ಮೈಸೂರು

ಶಿಲ್ಪಿ ಅರುಣ್ ಯೋಗಿರಾಜ್‌ಗೆ 12 ಲಕ್ಷ ರೂಪಾಯಿ ಬಾಕಿ ಉಳಿಸಿಕೊಂಡ ಸರ್ಕಾರ

ಆಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡ ಮೂರ್ತಿಯನ್ನು ಕೆತ್ತನೆ ಮಾಡಿದ ಅರುಣ್ ಯೋಗಿರಾಜ್ ಅವರಿಗೆ ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸರ್ಕಾರವು 12 ಲಕ್ಷ ರೂ. ಹಣವನ್ನು ನೀಡದೇ ಬಾಕಿ ಉಳಿಸಿಕೊಂಡಿದೆ.
Photo Credit : News Kannada

ಮೈಸೂರು: ಆಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡ ಮೂರ್ತಿಯನ್ನು ಕೆತ್ತನೆ ಮಾಡಿದ ಅರುಣ್ ಯೋಗಿರಾಜ್ ಅವರಿಗೆ ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸರ್ಕಾರವು 12 ಲಕ್ಷ ರೂ. ಹಣವನ್ನು ನೀಡದೇ ಬಾಕಿ ಉಳಿಸಿಕೊಂಡಿದೆ.

ಮೈಸೂರಿನ ಅರುಣ್ ಯೋಗಿರಾಜ್ ಅವರು 2016 ರಲ್ಲಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುತ್ಥಳಿಯನ್ನು ಕೆತ್ತಿದ್ದರು. ಆದರೆ, ಈ ಮೂರ್ತಿ ಕೆತ್ತನೆಯಾಗಿ ಹಾಗೂ ಪ್ರತೊಷ್ಠಾಪನೆಗೊಂಡು 8 ವರ್ಷಗಳು ಕಳೆದರೂ ಸಹ, ಇವರಿಗೆ ಸರ್ಕಾರದಿಂದ ಇನ್ನೂ ಹಣವನ್ನೇ ಕೊಟ್ಟಿಲ್ಲ.

ಜಯಚಾಮರಾಜೇಂದ್ರ ಒಡೆಯರ್ ಅವರ ಮೂರ್ತಿ ಕೆತ್ತನೆ ಮಾಡಿಕೊಡುಂತೆ ಸ್ವತಃ ಮೈಸೂರು ಮಹಾನಗರ ಪಾಲಿಕೆಯಿಂದ ಆದೇಶ ಕೊಡಲಾಗಿತ್ತು. ಆದರೆ, ಮೂರ್ತಿ ಕೆತ್ತನೆಯಾಗಿ ಪ್ರತಿಷ್ಠಾಪನೆಗೊಂಡ ನಂತರ ಇವರ ಕಾರ್ಯವನ್ನೇ ಮರೆತಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು, ‘ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುತ್ಥಳಿಯನ್ನು ಅರುಣ್ ಯೋಗಿರಾಜ್ ಅವರು 2016 ರಲ್ಲೇ ಕೆತ್ತಿದ್ದರು. 8 ವರ್ಷಗಳು ಆದರೂ ಸಹ, ಮೈಸೂರು ಮಹಾನಗರ ಪಾಲಿಕೆಯವರು ಇವರಿಗೆ ಹಣ ಕೊಡದೆ ಸತಾಯಿಸುತ್ತಿರುವುದು ತರವಲ್ಲ. ಇದು ಒಬ್ಬ ಶಿಲ್ಪಿಗೆ ಅಲ್ಲದೆ, ಮೈಸೂರನ್ನು ಬೆಳಗಿದ ಯದುವಂಶದ ಅರಸರಿಗೆ ಮಾಡುವ ಅವಮಾನ. ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇದೆ ಜಿಲ್ಲೆಯವರೇ ಆದ ಸನ್ಮಾನ್ಯ ಮುಖ್ಯ ಮಂತ್ರಿಗಳು ಕೂಡಲೇ ಅರುಣ್ ಯೋಗಿರಾಜರಿಗೆ ಕೊಡಬೇಕಾದ ಮೊತ್ತವನ್ನು ಗೌರವಯುತವಾಗಿ ಹಾಗೂ ತುರ್ತಾಗಿ ಕೊಡಬೇಕು’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು