ಕೆ.ಆರ್.ಪೇಟೆ: ಪ್ರತಿ 12 ವರ್ಷಗಳಿಗೊಮ್ಮೆ ಸರ್ಕಾರದ ವತಿಯಿಂದ ಮಹಾಕುಂಭಮೇಳ ನಡೆಸಲು ಅಧಿಕೃತ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ತಿಳಿಸಿದ್ದಾರೆ.
ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಪುರ-ಸಂಗಾಪುರ-ಅಂಬಿಗರಹಳ್ಳಿ ಗ್ರಾಮಗಳ ಬಳಿಯಿರುವ ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ಜೀವ ನದಿಗಳ ಸಂಗಮ ಕ್ಷೇತ್ರದಲ್ಲಿ ನಡೆಯುತ್ತಿದ್ದ ನಾಲ್ಕು ದಿನಗಳ ಮಹಾಕುಂಭಮೇಳದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡುವುದರಿಂದ ಮನುಷ್ಯನು ತನಗರಿಯದೇ ಮಾಡಿದ ಪಾಪಗಳು ತೊಳೆದು ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ಆಶಯದೊಂದಿಗೆ ಕುಂಭಮೇಳವನ್ನು ಆಯೋಜನೆ ಮಾಡುವ ಪದ್ಧತಿಯನ್ನು ಜಾರಿಗೆ ತರಲಾಗಿದ್ದು, ಇದರಿಂದ ಪಂಚಭೂತಗಳ ಆರಾಧನೆಯಿಂದ ಪುಣ್ಯ ಸಿಗುತ್ತದೆ. ನದಿ ನೀರಿನಲ್ಲಿ ಮುಳುಗಿದರೆ ದೇಹದ ಕೊಳೆ ಹೋಗುತ್ತದೆ. ಜೊತೆಜೊತೆಗೆ ನಮ್ಮ ಮನಸ್ಸಿನ ಕೊಳೆಯನ್ನು ಪುಣ್ಯ ಸ್ನಾನದ ಮೂಲಕ ಹೊರ ಚೆಲ್ಲಿ, ಉತ್ತಮ ಸದ್ಗುಣಗಳನ್ನು ರೂಢಿಸಿಕೊಳ್ಳಬೇಕು ಎಂದರು.
ಇದೇ ವೇಳೆ ಪವಿತ್ರ ಮಹಾ ಕುಂಭಮೇಳದ ಅಂಗವಾಗಿ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ತ್ರಿವೇಣಿ ಸಂಗಮದಲ್ಲಿ ನಡೆದ ಲೇಸರ್ ಶೋ ಮತ್ತು ಗಂಗಾರತಿ ಭಕ್ತರ ಮನಸೆಳೆಯಿತು. ನದಿಯ ತಟದಿಂದ ಲೇಸರ್ ಕಿರಣಗಳ ಆಕರ್ಷಕ ಶೋ ನೋಡುಗರ ಗಮನ ಸೆಳೆಯಿತು. ಪುನೀತ್ ರಾಜ್ಕುಮಾರ್, ಲತಾಮಂಗೇಶ್ಕರ್ ಸೇರಿದಂತೆ ಹಲವು ವಿಧದ ಹಾಡುಗಳಿಗೆ ಬಣ್ಣಬಣ್ಣದ ಕಿರಣಗಳು ಚಿತ್ತಾರ ಮೂಡಿಸಿದ್ದವು.
ಉತ್ತರ ಭಾರತದ ಕಾಶಿಯಿಂದ ಆಗಮಿಸಿದ್ದ ರಣಧೀರ್ ಪಂಡಿತರ ನೇತೃತ್ವದ ಪರಿಣಿತರ ತಂಡ ಸುಮಾರು ಒಂದು ಗಂಟೆಗಳ ಕಾಲ ಕಾವೇರಿ, ಹೇಮಾವತಿ ಲಕ್ಷ್ಮಣತೀರ್ಥ ನದಿಗಳು ಸೇರುವ ಸ್ಥಳದಲ್ಲಿ ನಿರ್ಮಿಸಲಾಗಿದ್ದ ವಿಶೇಷ ವೇದಿಕೆಯಲ್ಲಿ ಆರತಿ ಕಾರ್ಯಕ್ರಮ ಪ್ರದರ್ಶಿಸಿದರು.
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…
ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…
ಸೂಪರ್ಬಿಟ್ ರ್ಯಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಭಾರತದ ಗ್ರ್ಯಾಂಡ್…
ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…
ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ಗೆ 14…