ಮೈಸೂರು

ಗುಂಡ್ಲುಪೇಟೆ: ಬಂಡೀಪುರ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಗುಂಡ್ಲುಪೇಟೆ: ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ದೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.‌

ಗುಂಡ್ಲುಪೇಟೆ ತಾಲೂಕಿನ‌ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಬಿದಿರು ತಿನ್ನುತ್ತಿದ್ದ ವೇಳೆ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥ ಸಾರಥಿ, ಗಜೇಂದ್ರ, ಹರ್ಷ ಎಂಬ ಸಾಕಾನೆಗಳ ಸಹಾಯದಿಂದ ಸೆರೆ ಹಿಡಿಯಲಾಗಿದೆ. ಕುಂದಕೆರೆ ಅರಣ್ಯ ವಲಯದ ಜಮೀನುಗಳಲ್ಲಿ ನಿತ್ಯವೂ ಈ ಪುಂಡಾನೆ ಬೆಳೆ ನಾಶ ಮಾಡುತ್ತಿತ್ತು. ಇದರಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದರು.‌ ಬಳಿಕ ಎಚ್ಚೆತ್ತ ಬಂಡೀಪುರ‌ ಅರಣ್ಯ ಇಲಾಖೆ ಸಿಬ್ಬಂದಿ 4 ದಿನಗಳಿಂದ ಪುಂಡಾನೆ ಸೆರೆ ಕಾರ್ಯಾಚರಣೆ ಕೈಗೊಂಡಿದ್ದರು. ಕೊನೆಗೂ ಈ ಕಾರ್ಯಾಚರಣೆ ಯಶಸ್ವಿಯಾಗಿದ್ದಾರೆ.

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷವನ್ನು ನಿಯಂತ್ರಿಸಲು ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ನಾಡಿಗೆ ಬಂದ ಪುಂಡಾನೆಗಳನ್ನು ತ್ವರಿತವಾಗಿ ಕಾಡಿಗೆ ಕಳುಹಿಸಲು ಬನ್ನೇರುಘಟ್ಟ ಮತ್ತು ರಾಮನಗರದಲ್ಲಿ ಎರಡು ಕಡೆ ಆನೆ ಕಾರ್ಯಪಡೆಗಳನ್ನು ರಚಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ್‌ ಖಂಡ್ರೆ ಇತ್ತೀಚೆಗಷ್ಟೇ ತಿಳಿಸಿದ್ದನ್ನು ಸ್ಮರಿಸಬಹುದು.

Sneha Gowda

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

17 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

36 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

53 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago