ಮೈಸೂರು

ಭಾರೀ ಗಾಳಿಮಳೆಗೆ ಮಹಿಳೆ ಬಲಿ: ಜನಜೀವನ ಅಸ್ತವ್ಯಸ್ತ

ಪಿರಿಯಾಪಟ್ಟಣ: ತಾಲೂಕಿನ ಹಲವೆಡೆ ಗುರುವಾರ ಮಧ್ಯಾಹ್ನ ಬಿದ್ದ ಬಿರುಗಾಳಿ ಸಹಿತ ಭಾರೀ ಮಳೆಗೆ ಓರ್ವ ಮಹಿಳೆ ಮೃತಪಟ್ಟು ಹಲವೆಡೆ ವಿದ್ಯುತ್ ಕಂಬ ಹಾಗೂ ಮರಗಳು ರಸ್ತೆ ಮೇಲೆ ಬಿದ್ದು ಸಂಚಾರ ಮತ್ತು ಜನಜೀವನ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.

ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದ ಶೋಭಾ(42) ಮಳೆ ಗೆ ಬಲಿಯಾಗಿದ್ದಾರೆ, ಇವರು ಮಳೆ ಸುರಿದ ವೇಳೆ ಆಸರೆ ಪಡೆಯಲು ನಿಂತಿದ್ದ ಟ್ರ್ಯಾಕ್ಟರ್ ಶೆಡ್ ನ ಮೇಲ್ಛಾವಣಿಯ ಶೀಟ್ ಬಿರುಗಾಳಿಗೆ ಹಾರಿ ಛಾವಣಿ ಕುಸಿದು ಬಿದ್ದಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಆರಕ್ಷಕ ಇಲಾಖೆ ಸಿಬ್ಬಂದಿಯೊಂದಿಗೆ ಕಂದಾಯ ಇಲಾಖೆ ಶಿರಸ್ತೇದಾರ್ ನಂದಕುಮಾರ್ ಕಂದಾಯಾಧಿಕಾರಿ ಶ್ರೀಧರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಪರಿಹಾರಕ್ಕೆ ಸ್ಥಳೀಯರು ಒತ್ತಾಯಿಸಿದ್ದಾರೆ.

ತಾಲೂಕಿನ ಚಿಟ್ಟೆನಹಳ್ಳಿ ಗ್ರಾಮ ಬಳಿ ಮೈಸೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಗಾತ್ರದ ಮರ ರಸ್ತೆಗುರುಳಿದ ಪರಿಣಾಮ ಅರ್ಧಗಂಟೆಗೂ ಹೆಚ್ಚು ಕಾಲ ಸಂಚಾರಕ್ಕೆ ತೊಂದರೆಯಾಗಿ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು ರಸ್ತೆಯಲ್ಲಿ ಬಿದ್ದ ಮರ ತೆರವು ಮಾಡಿ ನಂತರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ಗುರುವಾರ ಮಧ್ಯಾಹ್ನ ಬಿರುಗಾಳಿ ಆರ್ಭಟ ಹೆಚ್ಚಾಗಿ ಮಳೆ ಬಿದ್ದ ಸಂದರ್ಭ ಕಂದೇಗಾಲ ತೆಲಗಿನಕುಪ್ಪೆ ಕೋಮಲಾಪುರ ಬೆಕ್ಕರೆ ಬೆಟ್ಟೆಗೌಡನಕೊಪ್ಪಲು ಕೊಣಸೂರು ತಿಮಕಾಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬ ಹಾಗೂ ಭಾರಿ ಗಾತ್ರದ ಮರಗಳು ರಸ್ತೆ ಮೇಲೆ ಬಿದ್ದ ಪರಿಣಾಮ ಸಂಚಾರಕ್ಕೆ ತೊಂದರೆ ಉಂಟಾಗಿ ಸಾರಿಗೆ ಸೇರಿದಂತೆ ಇತರೆ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿದವು.

ಹಲವು ಗ್ರಾಮಗಳಲ್ಲಿ ದನದ ಕೊಟ್ಟಿಗೆ ಹಾಗೂ ರೇಷ್ಮೆ ಶೆಡ್ ಚಾವಣಿ ಹಾರಿ ಅಪಾರ ಪ್ರಮಾಣದ ಹಾನಿ ಉಂಟಾಗಿ ರೈತರಿಗೆ ನಷ್ಟ ಉಂಟಾಗಿದೆ, ಕಟಾವಿಗೆ ಬಂದಿದ್ದ ಮಾವು ಬೆಳೆ ಬಿರುಗಾಳಿ ಆರ್ಭಟಕ್ಕೆ ನಾಶವಾದ ವರದಿಯಾಗಿದೆ. ವಿದ್ಯುತ್ ಕಂಬ ಧರೆಗುರುಳಿದ ಪರಿಣಾಮ ತಕ್ಷಣ ಎಚ್ಚೆತ್ತ ಸೆಸ್ಕ್ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಸೆಸ್ಕ್ ಬೆಟ್ಟದಪುರ ಉಪ ವಿಭಾಗದ ಎಇಇ ಪ್ರಶಾಂತ್ ಕುಮಾರ್ ಮಾಹಿತಿ ನೀಡಿದ್ದಾರೆ.

ಒಟ್ಟಾರೆ ಮಳೆಯಿಂದ ಒಂದೆಡೆ ರೈತರು ಹರ್ಷವಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರೆ ಮತ್ತೊಂದೆಡೆ ಅಪಾರ ಪ್ರಮಾಣದ ಹಾನಿಯಾದ ವರದಿಯಾಗಿದೆ.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

32 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

57 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago