News Karnataka Kannada
Thursday, May 02 2024
ಮೈಸೂರು

ಅಲೆಮಾರಿಗಳಿಗೆ ವಸತಿ ಸೌಲಭ್ಯ: ರವೀಂದ್ರ ಶೆಟ್ಟಿ

Ravindra
Photo Credit : By Author

ಮೈಸೂರು: ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಕುಟುಂಬಗಳಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ  ನಿಗಮದ ಅಧ್ಯಕ್ಷರಾದ ರವೀಂದ್ರಶೆಟ್ಟಿ ಅವರು ತಿಳಿಸಿದರು.

ಜಲದರ್ಶಿನಿ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಶೇ 40 ರಷ್ಟು ಕುಟುಂಬಗಳಿಗೆ ಸ್ವತಃ ಮನೆ ಇಲ್ಲ. ಇವರಿಗೆ ಸೂರು ಕಲ್ಪಿಸಲು ವಸತಿ ಸಚಿವರಿಗೆ ಮನವಿ ಮಾಡಲಾಗಿದೆ. ವಸತಿ ರಹಿತರ ಸರ್ವೆ ಮಾಡಲಾಗುತ್ತಿದೆ. ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು  ತಿಳಿಸಿದರು.

ಅಲೆ ಮಾರಿ ಮತ್ತು ಅರೆ ಅಲೆಮಾರಿ ಜನಾಂಗದಲ್ಲಿ 44 ವಿವಿಧ ಜಾತಿಗಳು ಬರುತ್ತವೆ. ಮೈಸೂರಿನಲ್ಲಿ ಸೂಮಾರು 9645  ಅಲೆಮಾರಿ ಮತ್ತು ಅರೆ ಅಲೆಮಾರಿ ಜನಸಂಖ್ಯೆ ಇದೆ. ಜಿಲ್ಲೆಯಲ್ಲಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 42 ಪಲಾನುಭವಿಗಳಿಗೆ ತಲಾ 50 ಸಾವಿರಗಳಂತೆ ಒಟ್ಟು 21 ಲಕ್ಷ ಸಾಲ ಮತ್ತು ಸಹಾಯಧನ ನೀಡಲಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ 03 ಜನ ಪಲಾನುಭವಿಗಳಿಗೆ ತಲಾ 1.5 ಲಕ್ಷಗಳ ಸಹಾಯಧನ ನೀಡಲಾಗಿದೆ. ಕಿರು ಸಾಲ ಯೋಜನೆಯಡಿ 22 ಪಲಾನುಭವಿಗಳಿಗೆ 4.40 ಲಕ್ಷಗಳ ಸಾಲ ಮತ್ತು ಸಹಾಯಧನ ಬಿಡುಗಡೆ ಮಾಡಲಾಗಿದೆ. ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಒಬ್ಬ ವಿಧ್ಯಾರ್ಥಿಯ 04 ವರ್ಷದ ಇಂಜಿನಿಯರಿಗ್ ವ್ಯಾಸಂಗಕ್ಕೆ 3.70 ಲಕ್ಷಗಳನ್ನು ಮಂಜೂರು ಮಾಡಲಾಗಿದ್ದು, 02 ಕಂತುಗಳಲ್ಲಿ 1.90 ಲಕ್ಷ ರೂ ಗಳ ಸಾಲ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಲೆಮಾರಿ ಅರೆ ಅಲೆಮಾರಿ ಅಭಿವೃದ್ದಿ ನಿಗಮದ ಸದಸ್ಯರಾದ ಟಿ.ಮಂಜುನಾಥ್, ಅಲೆಮಾರಿ ಅರೆ ಅಲೆಮಾರಿ ಒಕ್ಕೂಟದ  ಕಾರ್ಯದರ್ಶಿಗಳಾದ ಶಿವಾನಂದ ಭಟ್, ದೇವರಾಜ ಅರಸ್ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕಾರ ಹೆಚ್.ಎಂ.ಶೋಭಾ ಅವರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು