ಹನೂರು: ವಿದ್ಯುತ್ ಕಂಬ ಮುರಿದು ತಂತಿ ಹಸುವಿನ ಮೇಲೆ ಬಿದ್ದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹುಲ್ಲೇಪುರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ಮೃತಪಟ್ಟ ಹಸು ಮಹೇಶ್ ಆರಾಧ್ಯ ಎಂಬುವರಿಗೆ ಸೇರಿದ್ದು ಅದನ್ನು ಜಮೀನಿನಲ್ಲಿ ಮೇಯಲು ಕಟ್ಟಲಾಗಿದ್ದು, ಈ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ವಿದ್ಯುತ್ ತಂತಿ ಹಸುವಿನ ಮೇಲೆ ಬಿದ್ದ ಪರಿಣಾಮವಾಗಿ ಅದು ಸ್ಥಳದಲ್ಲಿಯೇ ಮೃತಪಟ್ಟಿದೆ.
ಈ ವಿದ್ಯುತ್ ಕಂಬ ಹಲವು ವರ್ಷಗಳಿಂದ ಮರದ ಕಂಬದಲ್ಲೇ ಇದ್ದು, ಇದನ್ನು ಬದಲಾಯಿಸಿ ಕಾಂಕ್ರಿಟ್ ಕಂಬ ಹಾಕುವಂತೆ ಒತ್ತಾಯಿಸಿ ಸೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು.
ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರ ಆರೋಪವಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸೆಸ್ಕಾಂ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.