ಮೈಸೂರು: ನಾನು ಖಂಡಿತವಾಗಿಯೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿ ಅಲ್ಲ ಎನ್ನುವ ಮೂಲಕ ಲೋಕಸಭಾ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ಎಂಬ ವಿಷಯದ ಕುರಿತಂತೆ ಚರ್ಚೆಗೆ ಮಾಜಿ ಶಾಸಕ ಸಾ.ರಾ.ಮಹೇಶ್ ತೆರೆ ಎಳೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ನಾನು ಖಂಡಿತವಾಗಿಯೂ ಟಿಕೆಟ್ ಆಕಾಂಕ್ಷಿ ಅಲ್ಲ. ನನ್ನ ಮಾನಸಿಕ, ಆರೋಗ್ಯ ಮತ್ತು ಆರ್ಥಿಕ ಪರಿಸ್ಥಿತಿ ಅಷ್ಟು ಚೆನ್ನಾಗಿಲ್ಲ. ನನಗೆ ಕಳೆದ 35 ವರ್ಷಗಳಿಂದಲೂ ಬಿಜೆಪಿ ಜೊತೆ ಒಡನಾಟವಿದೆ. ಆದರೆ ಚುನಾವಣೆ ವಿಚಾರವಾಗಿ ನಾನು ಯಾರನ್ನೂ ಭೇಟಿ ಮಾಡಿಲ್ಲ ಹಾಗೂ ಅದರ ಕುರಿತಂತೆ ಯಾವ ಚರ್ಚೆಯೂ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೇ ಸದ್ಯಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಪ್ರತಾಪ್ ಸಿಂಹ ಅವರೇ ಕಣಕ್ಕಿಳಿಯಲಿದ್ದಾರೆ. ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದೊಂದೇ ನಮ್ಮ ಗುರಿಯಾಗಿದೆ. ಆದರೆ ನನಗೆ ಯಾವ ಚುನಾವಣೆಗೂ ಸ್ಪರ್ಧೆ ಮಾಡುವ ಆಸಕ್ತಿ ಇಲ್ಲ. ಹೀಗಾಗಿ ಸದ್ಯಕ್ಕೆ ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿರುವ ಎಲ್ಲ ಚರ್ಚೆಗಳು ಸತ್ಯಕ್ಕೆ ದೂರವಾದವು.
ಕುಮಾರಸ್ವಾಮಿ ಅವರು ನಮ್ಮ ನಾಯಕರಾಗಿದ್ದು, ಅವರು ಈ ಬಗ್ಗೆ ಏನು ನಿರ್ಧಾರ ಮಾಡುತ್ತಾರೆ ಗೊತ್ತಿಲ್ಲ. ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದರೂ, ಚುನಾವಣೆ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ ಎಂದ ಅವರು, ಈ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವುದು ಊಹಾಪೋಹಗಳಷ್ಟೇ ಎಂದಿದ್ದಾರೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್ಗೆ ಪ್ರವೇಶಿಸಿದೆ. ಇನ್ನು ಆರ್ಸಿಬಿ…
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…