News Karnataka Kannada
Tuesday, April 30 2024
ಮೈಸೂರು

ಅಭಿವೃದ್ಧಿಯಲ್ಲಿ ಮೈಸೂರಿನ ಕೆ.ಆರ್. ಕ್ಷೇತ್ರ ಪ್ರಥಮ

In the development of K.R. Nagar, Mysuru. Field First
Photo Credit : By Author

ಮೈಸೂರು: ದೇಶದಲ್ಲೇ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಬುನಾದಿ ಹಾಕೋಣ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.54ರ ಕನಕಗಿರಿಯಲ್ಲಿ ಆಯೋಜಿಸಲಾಗಿದ್ದ ಯೋಗಕ್ಷೇಮ ಯಾತ್ರೆ ವೇಳೆ ಮಾತನಾಡಿದ ಅವರು, ಇಡೀ ದೇಶ ಇಂದು ಕೃಷ್ಣರಾಜ ಕ್ಷೇತ್ರದತ್ತ ತಿರುಗಿ ನೋಡುತ್ತಿದೆ. ಅಂತಹ ಯೋಜನೆಗಳು ಕ್ಷೇತ್ರದಲ್ಲಿ ಜಾರಿಯಾಗಿವೆ. ಅದಕ್ಕಾಗಿ ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಂಬಿದ ಸಭೆಯಲ್ಲಿ ಬೆನ್ನುತಟ್ಟಿ ಪ್ರೋತ್ಸಾಹಿಸಿರುವುದು ಸಾಕ್ಷಿಯಾಗಿದೆ ಎಂದರು.

ಅಭಿವೃದ್ಧಿ ವಿಚಾರದಲ್ಲಿ ಕೆ.ಆರ್.ಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಾಹಿತಿ ತಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುಂಬಿದ ಸಮಾವೇಶದಲ್ಲಿ ಬೆನ್ನು ತಟ್ಟಿ ಆಶೀರ್ವದಿಸಿದ್ದಾರೆ. ಈ ಎಲ್ಲಾ ಫಲ ಕ್ಷೇತ್ರದ ಜನರಿಗೆ ಸಲ್ಲಲಿದೆ ಎಂದ ಅವರು ಏಪ್ರಿಲ್ ತಿಂಗಳಲ್ಲಿ ನಾನು ಹಾಗೂ ನಮ್ಮ ಕಾರ್ಯಕರ್ತರು ಕ್ಷೇತ್ರದ ಪ್ರತಿ ಮನೆ ಬಾಗಿಲಿಗೆ ಬರಲಿದ್ದೇವೆ, ನಿಮ್ಮ ಆಶೀರ್ವಾದ ನನಗೆ ಬೇಕಿದೆ. ಭ್ರಷ್ಟಾಚಾರ ರಹಿತ ಕ್ಷೇತ್ರ ಮಾಡುವ ಸಲುವಾಗಿ ದೇವರ ಮುಂದಿಟ್ಟ ಹತ್ತು ರೂ. ನೀಡಿ ಆಶೀರ್ವದಿಸಿ ಎಂದು ಮನವಿ ಮಾಡಿದರು.

ಭಾರತೀಯ ಜನತಾ ಪಕ್ಷ ಅಭಿವೃದ್ಧಿಯ ಮಂತ್ರ ಪಠಿಸುತ್ತದೆಯೇ ಹೊರತು, ಅನ್ಯ ವಿಚಾರಗಳತ್ತ ಗಮನ ಹರಿಸುವುದಿಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಸಾಬೀತು ಮಾಡಿದ್ದಾರೆ. ಆ ದಿಕ್ಕಿನಲ್ಲಿ ನಮ್ಮೆಲ್ಲರ ಚಿತ್ತ ಇರಬೇಕು ಎಂದು ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯ 482 ಕಿಮೀ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆಗೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಮಾತ್ರವಲ್ಲ ಮುಂದಿನ ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಾರದ ರೀತಿಯಲ್ಲಿ ದೂರದೃಷ್ಟಿಯ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಎಂದರು.

ಜಾತಿ, ಧರ್ಮ ಮೀರಿ ಈ ಕ್ಷೇತ್ರದ ಜನ ನನ್ನನ್ನು ಮನೆ ಮಗನಂತೆ ಕಂಡಿದ್ದಾರೆ, ಆಶೀರ್ವದಿಸಿದ್ದಾರೆ. ಅದರಂತೆಯೇ ನಾನು ಶಾಸಕನಾಗಿದ್ದ ಅಷ್ಟೂ ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ನಡೆಯುತ್ತಿರುವ ಐದನೇ ಯೋಗಕ್ಷೇಮ ಯಾತ್ರೆ ಇದಾಗಿದೆ. ಜನರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಬೋರ್ವೆಲ್ ಮುಕ್ತ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಯಶಸ್ಸು ಸಾಧಿಸಿದ್ದೇವೆ. ಮಳೆಗಾಲದಲ್ಲಿ ವಾರ್ಡಿನ ಹಲವೆಡೆ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಇದೀಗ ಆ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಹತ್ತು ಹಲವು ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗಿದೆ. ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.

ಬೋರ್ವೆಲ್ ಮುಕ್ತ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಯಶಸ್ಸು ಸಾಧಿಸಿದ್ದೇವೆ. ಮಳೆಗಾಲದಲ್ಲಿ ವಾರ್ಡಿನ ಹಲವೆಡೆ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಇದೀಗ ಆ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಹತ್ತು ಹಲವು ಯೋಜನೆಗಳನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ ಬಗ್ಗೆ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ಆ ಕಲ್ಪನೆ ಸಾಕಾರಗೊಳ್ಳಬೇಕಾದರೆ ಅವರ ಮಾರ್ಗದಲ್ಲಿ ನಾವು ಹೆಜ್ಜೆ ಇಡಬೇಕು. ಅದಕ್ಕಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಇಚ್ಚೆ ಹಾಗೂ ಗುರಿ ನಮ್ಮದಾಗಬೇಕು ಎಂದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು