News Karnataka Kannada
Tuesday, May 07 2024
ಮೈಸೂರು

ಆರ್.ಧ್ರುವನಾರಾಯಣ್ ವಿಧಿವಶ ಹಿನ್ನೆಲೆ, ಹುಲ್ಲಹಳ್ಳಿಯಲ್ಲಿ ಸ್ವಯಂ ಪ್ರೇರಿತ ಬಂದ್

in the wake of the death of KPCC working president R. Dhruvanarayan, a voluntary bandh was observed in Hullahalli.
Photo Credit : News Kannada

ನಂಜನಗೂಡು: ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ನಿಧನರಾದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಇದರಿಂದ ಮೌನ ಆವರಿಸಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಆರ್. ಧ್ರುವನಾರಾಯಣ್ ಅಭಿಮಾನಿಗಳ ಬಳಗದಿಂದ ಭಾವಚಿತ್ರಕ್ಕೆ ಮೌನಚಾರಣೆ ಆಚರಿಸಿ ಶ್ರದ್ಧಾಂಜಲಿ ಕೋರಿದ್ದಾರೆ.

ಹುಲ್ಲಹಳ್ಳಿಯ ರಾಜಕುಮಾರ್ ರಸ್ತೆ, ಮೈಸೂರು ರಸ್ತೆ, ನಂಜನಗೂಡು ರಸ್ತೆ, ಹುರಾ ರಸ್ತೆಯಲ್ಲಿರುವ ವರ್ತಕರು, ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದ್ದಾರೆ.

ಗ್ರಾಂಪಂ ಮಾಜಿ ಸದಸ್ಯ ಚಾಮುಂಡ ನಾಯಕ ಮಾತನಾಡಿ, ಧ್ರುವನಾರಾಯಣ್ ರವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವರು ಎಂದೂ ದ್ವೇಷ ರಾಜಕಾರಣ ಮಾಡದೆ ಎಲ್ಲರೊಂದಿಗೂ ಪ್ರೀತಿ ವಿಶ್ವಾಸದಿಂದ ಇದ್ದರು. ಅವರು ಯುವ ಸಮುದಾಯಕ್ಕೆ ಮಾರ್ಗದರ್ಶನವಾಗಿದ್ದರು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದರು. ಅವರು ಸಂಸದರಾಗಿದ್ದಾಗ ಮಾಡಿದ ಕೆಲಸ ಹಾಗೂ ಜನಪರ ಯೋಜನೆಗಳು ಇನ್ನೂ ಜನರ ಮನಸ್ಸಿನಲ್ಲಿ ಇದೆ. ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲು ಅಸಾಧ್ಯವಾಗುತ್ತಿದೆ ಎಂದು ತಮ್ಮ ದುಃಖವನ್ನು ತೋಡಿಕೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು