News Karnataka Kannada
Sunday, April 28 2024
ಮೈಸೂರು

ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಸಿದ್ಧತೆಗೆ ಸೂಚನೆ

Instructions for preparations for Ashadha month at Chamundi Hill
Photo Credit : By Author

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಅಧಿದೇವತೆ ಚಾಮುಂಡೇಶ್ವರಿಗೆ ಪ್ರತಿ ಶುಕ್ರವಾರದಂದು ವಿಶೇಷ ಪೂಜೋತ್ಸವ ನಡೆಯಲಿದ್ದು, ವಿವಿಧ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಈ ಹಿನ್ನೆಲೆ ಯಾವುದೇ ಸಮಸ್ಯೆ ಆಗದಂತೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮ ಯಶಸ್ವಿಗೊಳಿಸುವ ಸಂಬಂಧ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಅಧಿಕಾರಿಗ ಸಭೆ ನಡೆಸಿ ಮಾತನಾಡಿದ ಅವರು, ಆಷಾಢ ಶುಕ್ರವಾರ ಹಾಗೂ ವರ್ಧಂತ್ಯುತ್ಸವದಂದು ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವ ಮಾದರಿಯಲ್ಲಿ, ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆ ಕೈಗೊಳ್ಳುವಂತೆ ಹೇಳಿದರು.

ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವಿದೆ ಹೀಗಾಗಿ ಭಕ್ತರಿಗೆ ಯಾವುದೇ ಅಡಚಣೆ ಉಂಟಾಗದಂತೆ ಕೆಲಸ ನಿರ್ವಹಿಸಿ. ಈ ಹಿಂದೆ ನಡೆದಿರುವ ಕ್ರಮಗಳನ್ನ ಅನುಸರಿಸಿ. ಆದರೆ, ಯಾವುದು ಲೋಪವಿದಿಯೋ ಅಂತಹ ವ್ಯವಸ್ಥೆಗಳನ್ನ ಬಿಟ್ಟು ಜನರಿಗೆ ಅನುಕೂಲ ವಾಗುವ ಎ ವ್ಯವಸ್ಥೆಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಬಾರಿ ಜೂ.23, 30, ಜು.7 ಹಾಗೂ ಜು.14ರಂದು ಆಷಾಢ ಶುಕ್ರವಾರ ಬರಲಿದ್ದು, ಜು.10ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವ ಇರಲಿದೆ. ಈ ಐದು ದಿನ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ರಾಜ್ಯದ ವಿವಿಧ ಭಾಗ ಸೇರಿದಂತೆ ಹೊರ ರಾಜ್ಯಗಳಿಂದಲೂ ಆಗಮಿಸಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಬಳಿಕ ಪೊಲೀಸ್ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ಮುಡಾ, ಆರೋಗ್ಯ ಇಲಾಖೆ, ಅಗ್ನಿಶಾಮಕ ದಳ, ಸೆಸ್ಕ್, ಲೋಕೋಪಯೋಗಿ ಇಲಾಖೆ, ಸಾರಿಗೆ ಇಲಾಖೆ, ಅರಣ್ಯ ಇಲಾಖೆ, ಮೈಸೂರು ತಾಲೂಕು ಪಂಚಾಯಿತಿ ಜವಾಬ್ದಾರಿಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ಸೂಕ್ತ ಸಿದ್ಧತೆ ನಡೆಸುವಂತೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ತನ್ವಿರ್ ಸೇಠ್, ಕೆ.ಹರೀಶ್‌ಗೌಡ, ಟಿ.ಎಸ್. ಶ್ರೀವತ್ಸ, ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್, ಜಿಧಿಕಾರಿ ಡಾ.ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬನೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ ಇದ್ದರು.

ಈ ನಡುವೆ ಚಾಮುಂಡೇಶ್ವರಿ ದೇಗುಲದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಮಾತನಾಡಿ, ಈ ಬಾರಿ ನಾಲ್ಕು ಆಷಾಢ ಶುಕ್ರವಾರಗಳು ಬಂದಿವೆ. ಜೂ.23ಕ್ಕೆ ಮೊದಲ ಆಷಾಢ ಶುಕ್ರವಾರವಾಗಿದ್ದು, ಜುಲೈ 10 ರಂದು ಚಾಮುಂಡೇಶ್ವರಿ ದೇವಿಯ ವಧಂತಿ ಮಹೋತ್ಸವ ನಡೆಯಲಿದೆ. ನಾಲ್ಕು ಆಷಾಢ ಶುಕ್ರವಾರ ಹಾಗೂ ವಧಂತಿಯ ದಿನಗಳಂದು ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ಜತೆಗೆ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ. ಆಷಾಢ ಮಾಸದಲ್ಲಿ ಶಕ್ತಿ ದೇವತೆಯ ಆರಾಧನೆ ಮಾಡುವುದರಿಂದ ಒಳಿತಾಗುತ್ತದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು