News Karnataka Kannada
Monday, April 29 2024
ಮೈಸೂರು

ಕೇಂದ್ರದಿಂದ ಅನುದಾನ ಬಂದಿಲ್ಲವೆನ್ನುದು ಸರಿಯಲ್ಲ: ನಿರ್ಮಲಾ ಸೀತಾರಾಮನ್

ಗ್ಯಾರಂಟಿ ಯೋಜನೆಗಳನ್ನು ನೀಡುವುದು ತಪ್ಪಲ್ಲ. ಆದರೆ, ಯೋಜನೆ ಜಾರಿಗೆ ಬೇಕಾದ ಅಗತ್ಯ ಅನುದಾನ  ನಮ್ಮಲ್ಲಿದೆಯೇ ಎಂದು ಪರಿಶೀಲಿಸಿ ನಂತರ ನೀಡಬೇಕಿತ್ತಾದರೂ  ಇದನ್ನು  ಮಾಡದ ರಾಜ್ಯ ಸರ್ಕಾರ ಏಕಾಏಕಿ ಗ್ಯಾರಂಟಿ ಜಾರಿ ಮಾಡಿ ಕೇಂದ್ರದ ವಿರುದ್ಧ ಅನುದಾನ ನೀಡುತ್ತಿಲ್ಲ ಎಂದು ದೂರುತ್ತಿರುವುದು ಸರಿಯಿಲ್ಲ  ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಹೇಳಿದ್ದಾರೆ.
Photo Credit : By Author

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ನೀಡುವುದು ತಪ್ಪಲ್ಲ. ಆದರೆ, ಯೋಜನೆ ಜಾರಿಗೆ ಬೇಕಾದ ಅಗತ್ಯ ಅನುದಾನ  ನಮ್ಮಲ್ಲಿದೆಯೇ ಎಂದು ಪರಿಶೀಲಿಸಿ ನಂತರ ನೀಡಬೇಕಿತ್ತಾದರೂ  ಇದನ್ನು  ಮಾಡದ ರಾಜ್ಯ ಸರ್ಕಾರ ಏಕಾಏಕಿ ಗ್ಯಾರಂಟಿ ಜಾರಿ ಮಾಡಿ ಕೇಂದ್ರದ ವಿರುದ್ಧ ಅನುದಾನ ನೀಡುತ್ತಿಲ್ಲ ಎಂದು ದೂರುತ್ತಿರುವುದು ಸರಿಯಿಲ್ಲ  ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಹೇಳಿದ್ದಾರೆ.

ಮೈಸೂರಿನ ಥಿಂಕರ್ಸ್ ಫೋರಂ ಸಂಘಟನೆ ವತಿಯಿಂದ ಮೈಸೂರಿನ ಕರಾಮುವಿವಿ ಘಟಿಕೋತ್ಸವ ಭವನದಲ್ಲಿ  ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಥಿಕ ಪರಿಸ್ಥಿತಿ ಪರಿಶೀಲಿಸದೆ ಏಕಾಏಕಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ರಾಜ್ಯ ಸರಕಾರ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೇ ಕೇಂದ್ರ ಸರಕಾರದಿಂದ ಅನುದಾನ ಬಂದಿಲ್ಲ ಎಂದು ಸುಳ್ಳು ಆರೋಪ ಮಾಡುತ್ತಿದೆ.

ಗ್ಯಾರಂಟಿ ಅನುಷ್ಠಾನಕ್ಕೂ ಮುನ್ನ ಕರ್ನಾಟಕ ಆರ್ಥಿಕ ಪರಿಸ್ಥಿತಿ ಸುಸ್ಥಿತಿಯಲ್ಲಿತ್ತು. ನಾನು ಆರ್ಥಿಕ ಮಂತ್ರಿಯಾಗಿ ಹೇಳುವುದೆಂದರೆ, ಉಚಿತ ಯೋಜನೆಗಳನ್ನು ನೀಡುವುದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ಉಚಿತ ಯೋಜನೆಗಳನ್ನು ಘೋಷಿಸುವ ಮುನ್ನ ಅದಕ್ಕೆ ಅಗತ್ಯವಿರುವ ಬಜೆಟ್ ನಮ್ಮಲ್ಲಿ ಲಭ್ಯವಿದೆಯೇ ಎಂಬುದನ್ನು ಪರಿಶೀಲಿಸಬೇಕು. ರಾಜ್ಯ ಸರಕಾರ ಇದ್ಯಾವುದನ್ನೂ ಪರಿಗಣಿಸದೇ ೬೦ ಸಾವಿರ ಕೋಟಿ ರೂ. ಅಗತ್ಯವಿರುವ ಗ್ಯಾರಂಟಿಗಳನ್ನು ಘೋಷಣೆ ಮಾಡಿತು. ಹೀಗಾಗಿ ಸದ್ಯ ಈ ಯೋಜನೆಗಳಿಗೆ ಹಣವಿಲ್ಲದೇ ಕೇಂದ್ರ ಸರಕಾರದಿಂದ ಅನುದಾನ ಬಂದಿಲ್ಲವೆಂದು ದೂರುವುದು ಸರಿಯಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಆಡಳಿತದಲ್ಲಿರುವ ಸರಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಆಧಾರ ರಹಿತ ಆರೋಪ  ಮಾಡುತ್ತಿದ್ದಾರೆ. ರಾಜ್ಯಕ್ಕೆ ನೀಡಬೇಕಾದ ಸಂಪೂರ್ಣ ಹಣವನ್ನು ನೀಡಲಾಗಿದೆ. ಶೀಘ್ರದಲ್ಲಿಯೇ ಈ ಕುರಿತ ಆಡಿಟ್ ಪತ್ರ ನಮಗೆ ತಲುಪಲಿದ್ದು, ಅದನ್ನು ಬಿಡುಗಡೆ ಮಾಡುತ್ತೇವೆ. ಆ ದಾಖಲೆ ನಮಗೆ ತಲುಪದ ಕಾರಣ ಅದನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಸೂಕ್ತ ದಾಖಲೆ, ಮಾಹಿತಿ  ಇಲ್ಲದೇ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ. ಮುಂಚಿತವಾಗಿ ಸಾಕಷ್ಟು ಸಮನ್ಸ್ ನೀಡಿದ ನಂತರವೇ ಬಂಧನವಾಗಿದೆ. ಇದಕ್ಕೆ ನ್ಯಾಯಾಲಯದ ಸಮ್ಮತಿಯೂ ಇತ್ತು. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ಬಿಜೆಪಿ ಕಳೆದ ಹತ್ತು ವರ್ಷದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿದೆ. ರಫೆಲ್ ಖರೀದಿ ಬಗ್ಗೆ ಟೀಕೆ ಮಾಡಿದವರಿಗೆ  ನ್ಯಾಯಾಲಯವೇ ತಕ್ಕ ಉತ್ತರ ನೀಡಿದೆ. ಈಗ ಕೆಲವರು ಚುನಾವಣಾ ಬಾಂಡ್ ಬಗ್ಗೆ ಮಾತನಾಡುತ್ತಿದ್ದಾರೆ. ಮೋದಿ ಹೆಸರಿಗೆ ಚ್ಯುತಿ ತರಲು ಹೀಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರದ ಪರಿಣಿತರು, ವಿದ್ಯಾರ್ಥಿಗಳು,  ಸಾರ್ವಜನಿಕರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು