Categories: ಮೈಸೂರು

ಜೆಡಿಎಸ್ ಕಾರ್ಯಕರ್ತರಿಂದ ಅದ್ಧೂರಿ ರೋಡ್ ಶೋ

ತಿ.ನರಸೀಪುರ: ಹಾಲಿ ಶಾಸಕ ಎಂ.ಅಶ್ವಿನ್ ಕುಮಾರ್ ಪರ ತಾಲೂಕಿನ ತಲಕಾಡು ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಅದ್ಧೂರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.

ತಲಕಾಡು ಹೋಬಳಿಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಕಾರ್ಯಕರ್ತರು ತಲಕಾಡು – ಮುಡುಕುತೊರೆ ಮುಖ್ಯರಸ್ತೆಯಿಂದ ವಿನಾಯಕ ನಗರ, ರಾಮಮಂದಿರ, ಪೊಲೀಸ್ ಸರ್ಕಲ್ ಮಾರ್ಗವಾಗಿ ಹಳೇ ತಲಕಾಡಿನ ವೈದ್ಯನಾಥೇಶ್ವರ ದೇವಾಲಯದ ಬಳಿ ಅಂತ್ಯಗೊಂಡಿತು. ದಾರಿಯುದ್ದಕ್ಕೂ ಜೆಡಿಎಸ್ ಪರ ಮತ್ತು ಪಕ್ಷದ ಅಭ್ಯರ್ಥಿ ಎಂ.ಅಶ್ವಿನ್ ಕುಮಾರ್ ಗೆ ಮತ ನೀಡುವಂತೆ ಪ್ರಚಾರ ನಡೆಸಲಾಯಿತು.

ದಿನದಿಂದ ದಿನಕ್ಕೆ ಜಿದ್ದಾ ಜಿದ್ದಿನ ಕಣವಾಗಿ ಪರಿವರ್ತನೆಗೊಂಡಿರುವ ತಿ.ನರಸೀಪುರ ಕ್ಷೇತ್ರದಲ್ಲಿ ಹಾಲಿ ಶಾಸಕ ಅಶ್ವಿನ್ ಕುಮಾರ್ ಸರಳ ,ಸಜ್ಜನಿಕೆಗೆ ಮೆಚ್ಚಿ ಎಲ್ಲ ಜನಾಂಗದ ನಾಯಕರು ಅವರ ಬೆಂಬಲಕ್ಕೆ ನಿಂತಿರುವುದು ಇಂದಿನ ಕಾರ್ಯಕ್ರಮವು ಸಾಕ್ಷಿಯಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕರೋಹಟ್ಟಿ ಪ್ರಭುಸ್ವಾಮಿ, ಶಾಸಕರ ಲಭ್ಯತೆ ಮತ್ತು ಜನತೆ ಜೊತೆ ಬೆರೆತಿರುವ ಈ ಭಾಗದ ಜನತೆಯೇ ಅವರ ಪರವಾಗಿ ಮತಯಾಚನೆ ಮಾಡುತ್ತಿರುವುದು ವಿಶೇಷ. ಈ ಭಾಗದ ಎಲ್ಲ ಜೊತೆ ಅನೋನ್ಯತೆ, ಸರಳ, ಜಾತ್ಯತೀತ ನಿಲುವಿಂದ ಶಾಸಕರು ಹೆಚ್ಚು ಜನ ಬೆಂಬಲ ಪಡೆದಿದ್ದಾರೆ ಎಂದರು.

ಅಶ್ವಿನ್ ಕುಮಾರ್ ಗೆ ಕ್ಷೇತ್ರದ ಬಗ್ಗೆ ಅಭಿವೃದ್ಧಿಯ ಅಪಾರ ದೂರದೃಷ್ಟಿ ಇದೆ. ಆದರೆ, ಕಳೆದ ಅವಧಿಯಲ್ಲಿ ಕೊರೊನ ಮತ್ತು ಪ್ರವಾಹದಿಂದ ಅವರಿಗೆ ಸರಿಯಾದ ಅವಕಾಶ ಸಿಕ್ಕಿಲ್ಲ. ಈ ಚುನಾವಣೆಯಲ್ಲಿ ಗೆದ್ದು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ಮಹದಾಸೆ ಅವರಲ್ಲಿದೆ. ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಸೇರುವ ಜನತೆಯ ಬೆಂಬಲ ಅಶ್ವಿನ್ ಕುಮಾರ್ಅವರಿಗೆ ಗೆಲುವಾಗಿ ಪರಿವರ್ತನೆಗೊಳ್ಳಲಿದೆ ಎಂದರು.

ಪಂಚರತ್ನ ಯೋಜನೆಯಲ್ಲಿ ಅಡಕವಾಗಿದೆ.ಯುವಕರಿಗೆ ಉದ್ಯೋಗ, ಮಹಿಳೆ ಸಬಲೀಕರಣ,ರೈತರ ಉತ್ತೇಜನ, ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಉನ್ನತೀಕರಣ ಕುಮಾರಸ್ವಾಮಿಯವರ ಕನಸಾಗಿದೆ. ಹಾಗಾಗಿ ಅವರ ಕನಸನ್ನು ನನಸು ಮಾಡಲು ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ವಿನ್ ಕುಮಾರ್ ಅವರನ್ನು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ತೊಟ್ಟವಾಡಿ ಮಹದೇವಸ್ವಾಮಿ, ಜೆ.ರಾಜು, ಸತೀಶ್ ನಾಯಕ, ಮಹಿಳಾ ಘಟಕದ ಯೊಶೋಧಮ್ಮ, ಸುಬ್ಬನಾಯಕ, ಹಸ್ತಿಕೇರಿ ನಾಗರಾಜು, ರಾಜೇಶ್ , ಮಾದೇಶ್, ರಂಗನಾಥ್, ರುದ್ರ, ಉಮೇಶ್, ನೌಷಾದ್, ಕುಮಾರನಾಯಕ್, ನಿಂಗರಾಜು, ಅರುಣ್, ಪರಿಣಾಮಿಪುರ ಪ್ರದೀಪ್, ದಳಪತಿ ಆನಂದ್ ಇತರರು ಹಾಜರಿದ್ದರು.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

2 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

3 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

3 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

4 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

4 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

4 hours ago