News Karnataka Kannada
Monday, April 29 2024
ಮೈಸೂರು

ಕೆ.ಆರ್.ಪೇಟೆ: ಕುಂಭಮೇಳದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Kumbha
Photo Credit : By Author

ಕೆ.ಆರ್.ಪೇಟೆ: ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುರ, ಅಂಬಿಗರಹಳ್ಳಿ, ಸಂಗಾಪುರದ ತ್ರಿವೇಣಿ ಸಂಗಮದಲ್ಲಿ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳದ ಸ್ವಚ್ಛತೆಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣ ಅಧಿಕಾರಿ ಸತೀಶ್ ಅವರ ನೇತೃತ್ವದಲ್ಲಿ 34 ಪಂಚಾಯಿತಿಗಳ ಸಿಬ್ಬಂದಿ ವರ್ಗಗಳನ್ನು ಒಗ್ಗೂಡಿ ಸ್ವಚ್ಛತೆ ಕಾರ್ಯವನ್ನು ನಡೆಸಿದರು.

ಈ ವೇಳೆ ಮಾತನಾಡಿದ ಇ.ಓ.ಸತೀಶ್ ಹಿಂದಿನಿಂದಲೂ ತಾಲೂಕಿನ ಐತಿಹಾಸಿಕ ಕ್ಷೇತ್ರವಾಗಿ ಹೊರಹೊಮ್ಮಿರುವ ತ್ರಿವೇಣಿ ಸಂಗಮದಲ್ಲಿ ದಕ್ಷಿಣ ಭಾರತದ ಮಹಾ ಕುಂಭಮೇಳವು ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ನಮ್ಮ ರಾಜ್ಯದಿಂದ ಹಾಗೂ ವರ ರಾಜ್ಯದಿಂದ ಹೆಚ್ಚು ಭಕ್ತಾಧಿಗಳು ಆಗಮಿಸುತ್ತಿರುವುದರಿಂದ ಈ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಹಾಗಾಗಿ ನಮ್ಮ ತಾಲೂಕಿನ 34 ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳ ಸಹಾಯದಿಂದ ಪ್ರತಿಯೊಬ್ಬರೂ ಕೈಯಲ್ಲಿ ಪ್ಲಾಸ್ಟಿಕ್ ಚೀಲ ಮತ್ತು ಕಸದ ಬುಟ್ಟಿಯನ್ನು ಹಿಡಿದು ಸ್ವಚ್ಛತೆ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ.

ಈ ಪವಿತ್ರ ಸ್ಥಳಕ್ಕೆ ಬರುವಂತಹ ಭಕ್ತಾಧಿಗಳು ಪ್ಲಾಸ್ಟಿಕ್ ಬಾಟಲ್ ಪ್ಲಾಸ್ಟಿಕ್ ಕವರ್ ಎಲ್ಲೆಂದರಲ್ಲಿ ಬಿಸಾಡುವುದರ ಬದಲು ಕಸದ ಡಬ್ಬಕ್ಕೆ ಹಾಕಿದರೆ ಬರುವಂತ ಸಾವಿರಾರು ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಊಟದ ಹಾಲಿನಲ್ಲಿ ಎಲ್ಲೆಂದರಲ್ಲಿ ಪ್ಲೇಟ್ ಮತ್ತು ನೀರಿನ ಬಾಟಲ್ ಗಳನ್ನು ಬಿಸಾಡಬೇಡಿ. ಸ್ವಚ್ಛತೆಯನ್ನು ಕಾಪಾಡಿಕೊಂಡರೆ ನಮ್ಮ ಆರೋಗ್ಯವು ಚೆನ್ನಾಗಿರುತ್ತೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶಿವಸ್ವಾಮಿ, ಶಿವಕುಮಾರ್, ರವಿಕುಮಾರ್, ಶಿವಕುಮಾರ್, ಗೀತಾ, ಹರ್ಷ, ರವಿಕುಮಾರ್, ನರಸಿಂಹರಾಜ್ ನೂತನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು