Categories: ಮೈಸೂರು

ಕೃಷ್ಣರಾಜಪೇಟೆ: ಸಚಿವ ನಾರಾಯಣಗೌಡರಿಂದ ಅಭಿಮಾನಿಗಳಿಗೆ ಔತಣಕೂಟ

ಕೃಷ್ಣರಾಜಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಲಕ್ಷ್ಮೀವೆಂಕಟೇಶ್ವರ ಸಮುದಾಯ ಭವನದಲ್ಲಿ ಸಚಿವ ನಾರಾಯಣಗೌಡ ಅಭಿಮಾನಿಗಳು ಹಾಗೂ ಬೆಂಬಲಿಗರು ಔತಣ ಕೂಟವನ್ನು ಏರ್ಪಡಿಸಿದ್ದರು.

ಈ ವೇಳೆ ಮಾತನಾಡಿದ ಸಚಿವ ನಾರಾಯಣಗೌಡ ಅವರು, ನಾನು ತಂದೆ ತಾಯಿಯನ್ನು ಕಳೆದುಕೊಂಡು ಇಪ್ಪತ್ತು ವರ್ಷಗಳಾಯಿತು. ತಬ್ಬಲಿಯಾದ ನನಗೆ ತಾಲ್ಲೂಕಿನ ಜನತೆಯೇ ತಂದೆತಾಯಿಗಳು ಎಂದು ಭಾವುಕರಾಗಿ ನುಡಿದರು

ನನ್ನ ತಂದೆ-ತಾಯಿಯರನ್ನು ದೂರದ ಮುಂಬಯಿ ನಗರಕ್ಕೆ ಕರೆದುಕೊಂಡು ಹೋಗಿ ಉದ್ಯಮಿಯಾಗಿ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೆ. ನನ್ನ ತಾಯಿ ಜೀವ ಬಿಡುವ ಸಂದರ್ಭದಲ್ಲಿ ಹುಟ್ಟಿದ ಊರನ್ನು ಮರೆಯಬೇಡ ಎಂದು ಭಾಷೆ ತೆಗೆದುಕೊಂಡರು. ನಂತರ ಕೃಷ್ಣರಾಜಪೇಟೆ ತಾಲ್ಲೂಕಿಗೆ ಸಮಾಜ ಸೇವಕನಾಗಿ ತೊಡಗಿದ್ದೆ. ಆಗಲೇ ರಾಜಕಾರಣಿಗಳ ಕಣ್ಣು ಕೆಂಪಾಯಿತು.

ಹೋಟೆಲ್‌ನಲ್ಲಿ ಲೋಟ ತೊಳೆಯುವ ಹೈದ ರಾಜಕಾರಣ ಮಾಡಲು ಸಾಧ್ಯವೇ? ಎಂಬ ಕಠೋರ ವರ್ತನೆಯ ಮಾತುಗಳಿಂದ ಪ್ರಭಾವಿತನಾಗಿ ರಾಜಕೀಯದಲ್ಲಿ ಆಸಕ್ತಿಯಿಲ್ಲದಿದ್ದರೂ ರಾಜಕಾರಣಕ್ಕೆ ಬರಲೇಬೇಕಾಯಿತು. ಮತದಾರ ಪ್ರಭುಗಳಾದ ನೀವು ನಿಮ್ಮ ಆಶೀರ್ವಾದದಿಂದ ನನ್ನನ್ನು ಸತತವಾಗಿ ಮೂರು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿ ಸಚಿವನಾಗಲು ಸಹಕರಿಸಿದ್ದೀರಿ. ಇದನ್ನು ಈ ಜನ್ಮದಲ್ಲಿ ಮರೆಯಲು ಸಾಧ್ಯವಿಲ್ಲ.

ಈ ನಿಮ್ಮ ಋಣವನ್ನು ತೀರಿಸಲು ಈ ಜನ್ಮದಲ್ಲಿ ಸಾಧ್ಯವಿಲ್ಲ. ಜೆಡಿಎಸ್ ನಿಂದ ಶಾಸಕನಾಗಿದ್ದಾಗ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸಾಧ್ಯವಾಗಲಿಲ್ಲ. ಆದರೆ ಬಿಜೆಪಿ ಪಕ್ಷಕ್ಕೆ ಬಂದು ನಾನು ಸಚಿವನಾದ ನಂತರ 2000 ಕೋಟಿಗಳಿಗಿಂತ ಹೆಚ್ಚಿನ ಅನುದಾನವನ್ನು ತಂದು ತಾಲ್ಲೂಕನ್ನು ಅಭಿವೃದ್ಧಿ ಪಡಿಸಲು ಪಣ ತೊಟ್ಟಿದ್ದೇನೆ. ಅಭಿವೃದ್ಧಿ ಕೆಲಸಗಳು ಪ್ರಗತಿ ಹಂತದಲ್ಲಿವೆ. ಇನ್ನಾರು ತಿಂಗಳಲ್ಲಿ ತಾಲ್ಲೂಕು ಅಭಿವೃದ್ಧಿಯಲ್ಲಿ ರಾಜ್ಯದಲ್ಲೇ ಮಾದರಿ ತಾಲ್ಲೂಕಾಗಲಿದೆ. ಈಗ ಚುನಾವಣೆ ಬಂದಿದೆ ನಾನು ಚುನಾವಣೆಯಲ್ಲಿ ನಿಲ್ಲಬೇಕಾ, ಬೇಡವಾ, ನನ್ನ ಅವಶ್ಯಕತೆ ತಾಲ್ಲೂಕಿಗೆ ಇದೆಯಾ ಎಂಬುದನ್ನು ನೀವೇ ತೀರ್ಮಾನ ಮಾಡಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಮನ್ಮುಲ್ ಮಾಜಿನಿರ್ದೇಶಕ ಎಸ್ ಅಂಬರೀಶ್, ರಾ?ಪ್ರಶಸ್ತಿ ವಿಜೇತ ಡಾ.ಅಂಚಿ.ಸಣ್ಣಸ್ವಾಮಿಗೌಡ, ಗೂಡೆಹೊಸಹಳ್ಳಿ ಜವರಾಯಿಗೌಡ, ಅಘಲಯ ಮಂಜುನಾಥ್, ಬೂಕನಕೆರೆ ಜವರಾಯಿಗೌಡ, ಅಕ್ಕಿಹೆಬ್ಬಾಳು ಗ್ರಾ.ಪಂ.ಅಧ್ಯಕ್ಷೆ ನಾಗೇಶ್ವರಿ, ಬೀರವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಬೀರುವಳ್ಳಿ ಕುಮಾರ್, ತಾಲೂಕು ಬಿಜೆಪಿ ಉಪಾಧ್ಯಕ್ಷ ಭಾರತೀಪುರ ಪುಟ್ಟಣ್ಣ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಂಜನಿಗೌಡಪಾಪಣ್ಣ, ಜೈನಹಳ್ಳಿ ಗೌಡಪ್ಪ, ಸಚಿವ ನಾರಾಯಣಗೌಡರ ಆಪ್ತಸಹಾಯಕ ದಯಾನಂದ್, ಮಾಕವಳ್ಳಿ ಗ್ರಾ.ಪಂ.ಸದಸ್ಯ ಕರೋಟಿ ಅನಿಲ್, ರಾಮಕೃಷ್ಣಗೌಡ, ಪುರಸಭಾಸದಸ್ಯ ಕೆ ಆರ್ ನೀಲಕಂಠ, ರವಿಶಿವಕುಮಾರ್, ಎಪಿಎಂಸಿ ನಿರ್ದೇಶಕ ನಾಗಣ್ಣ, ಲೋಹಿತ್, ಜಯರಾಮನಾಯಕ, ಚಂದ್ರಮೋಹನ್, ಕರ್ತೇನಹಳ್ಳಿಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

19 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

32 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

45 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago