ಮೈಸೂರು

ಕಾರ್ಮಿಕರಿಗೆ ದುಡಿಮೆಯೇ ಧರ್ಮ ದೇವರು: ಬನ್ನೂರು ರಾಜು

ಮೈಸೂರು: ಕಾಯಕವೇ ಕೈಲಾಸ ಎಂಬಂತೆ ದುಡಿಮೆಯನ್ನೇ ನಂಬಿ ಪ್ರಾಮಾಣಿಕವಾಗಿ ಬದುಕುತ್ತಿರುವ ಯಾವುದೇ ಕಾರ್ಮಿಕರಾಗಲಿ ಅವರಿಗೆ ದುಡಿಮೆಯೇ ಜಾತಿ, ಮತ, ಧರ್ಮ ಮತ್ತು ದೇವರು ಎಂದು ಸಾಹಿತಿ ಬನ್ನೂರು ಕೆ. ರಾಜು ಹೇಳಿದರು.

ನಗರದ ಕುವೆಂಪು ನಗರದಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಸಂಘದ ಆವರಣದಲ್ಲಿ ಏರ್ಪಡಿಸಿದ್ದ 2024 ರ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಸಮಾರಂಭದಲ್ಲಿ ದಿನದರ್ಶಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಒಬ್ಬ ವ್ಯಕ್ತಿ ಮಾಡಲಾಗದ್ದನ್ನು ಒಂದು ಸಂಘ ಮಾಡಬಲ್ಲದು ಹಾಗಾಗಿ ಸಂಘ ಶಕ್ತಿ ಅದರಲ್ಲೂ ವಿಶೇಷವಾಗಿ ಕಾರ್ಮಿಕ ಶಕ್ತಿ ಬಹುದೊಡ್ಡದೆಂದೂ, ಇಂಥಾ ಶಕ್ತಿಯಿಂದ ಸಮಾಜದ ಕ್ಷೇಮಾ ಭಿವೃದ್ಧಿ ಸಾಧ್ಯ. ಆದರ್ಶನೀಯ ಶ್ರೇಷ್ಠ ವ್ಯಕ್ತಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿರುವ ಈ ಸಂಘವು ತನ್ನದೇ ಆದ ಸಂಘಟನೆಯಿಂದ ನಿಸ್ವಾರ್ಥದ ಜನೋಪಯೋಗಿ ಕಾರ್ಯಗಳನ್ನು, ಮಾಡುತ್ತಿರುವ ಒಂದು ವಿಶಿಷ್ಟ ಸಂಸ್ಥೆಯಾಗಿದೆ ಎಂದರು.

ದಿನದರ್ಶಿಕೆ ಎಂಬುದು ನಮ್ಮಲ್ಲಿ ಅಕ್ಷರ ಸಂಸ್ಕೃತಿಗೂ ಮೊದಲೇ ಇದ್ದು ಅದು ಕಾಲಕ್ಕೆ ತಕ್ಕಂತೆ ಆಯಾ ಕಾಲಘಟ್ಟಗಳಲ್ಲಿ ತಂತ್ರಜ್ಞಾನದೊಡನೆ ಬೆಳೆದು ಪ್ರಸ್ತುತ ಆಧುನಿಕ ಜಗತ್ತಿನಲ್ಲಿ ಬಹು ವರ್ಣಮಯವಾಗಿ ವಿವಿಧ ರೂಪಗಳಲ್ಲಿ ಜನಾಕರ್ಷಣೀಯವಾಗಿದೆ. ‘ದಿನದರ್ಶಿಕೆ’ ಎಂಬುದು ಇಂದು ನಿನ್ನೆಯದಲ್ಲ. ಇದಕ್ಕೆ ಸುದೀರ್ಘವಾದ ಪ್ರಾಚೀನ ಇತಿಹಾಸವಿದೆ. ಭಾರತೀಯ ಸಂಸ್ಕೃತಿಯಲ್ಲಿ ಇದು ಹಾಸು ಹೊಕ್ಕಾಗಿದ್ದು ನಮ್ಮ ಪರಂಪರೆಯಲ್ಲಿ ಇದಕ್ಕೊಂದು ವಿಶಿಷ್ಟ ಸ್ಥಾನವಿದ್ದು ದಿನಗಣನೆಯ ಸಮಯ ಪ್ರಜ್ಞೆಯ ಪ್ರತೀಕವಾ ಗಿದೆ. ಗೋಡೆಯಲ್ಲಿದ್ದುಕೊಂಡೇ ನಮ್ಮನ್ನು ಪ್ರತಿದಿನವೂ ಎಚ್ಚರಗೊಳಿಸುವ ಒಂದು ವಿಶಿಷ್ಟ ಸಾಧನ ದಿನದರ್ಶಿಕೆ.

ಕಳೆದು ಹೋದ ನಂತರ ಮತ್ತೆ ಮರಳಿ ಬಾರದ ವಸ್ತುವೆಂದರೆ ಅದು ಸಮಯ. ಹಾಗಾಗಿ ಪ್ರತಿಯೊಬ್ಬರೂ ಅದರಲ್ಲೂ ವಿಶೇಷವಾಗಿ ಕಾರ್ಮಿಕರು ಸಮಯದ ಮಹತ್ವವನ್ನು ಬಲ್ಲವರಾಗಿರಬೇಕು. ಇಂತಹ ಅಮೂಲ್ಯವಾದ ಕಾಲದ ಬೆಲೆಯನ್ನು ಪ್ರತಿದಿನ ನೆನಪಿಸುವ ದಿನದರ್ಶಿಕೆಯನ್ನು ಬಹುಸುಂದರವಾಗಿ ಅಷ್ಟೇ ವಿಶಿಷ್ಟವಾಗಿ ಹೊರತಂದಿರುವ ಸಂಘದ ಕಾರ್ಯ ನಿಜಕ್ಕೂ ಶ್ಲಾಘನೀಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಕಾನೂನು ಸಲಹೆಗಾರ ವಕೀಲ ಎನ್. ಸುಂದರ್ ರಾಜು ಅವರು ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಒಂದು ಸಂಘವನ್ನು ಅದೂ ಕೂಡ ಕಾರ್ಮಿಕರ ಸಂಘವನ್ನು ಕಟ್ಟುವುದು ಸುಲಭ. ಆದರೆ ಅದನ್ನು ಸನ್ಮಾರ್ಗದಲ್ಲಿ ನಡೆಸಿ, ಬೆಳೆಸಿ,ಉಳಿಸುವುದು ಬಹಳ ಕಷ್ಟ. ಆದರೆ ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ಒಗ್ಗಟ್ಟಿನಲ್ಲಿ ಬಲವಿದೆ ಎಂಬಂತೆ ಎಲ್ಲರೂ ಒಗ್ಗೂಡಿ ಜನಮುಖಿ ಯಾಗಿ ಕೆಲಸ ಮಾಡುತ್ತಿರುವ ಒಂದು ಅಪರೂಪದ ಕಾರ್ಮಿಕ ಸಂಘಟನೆಯಾಗಿದೆ. ಇದೇ ಒಗ್ಗಟ್ಟನ್ನು ಅವರು ಕಾಪಾಡಿ ಕೊಂಡು ಹೋಗಬೇಕೆಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ರಾಜ್ಯ ಉಚ್ಛ ನ್ಯಾಯಾಲಯ ಕ್ರಿಯಾ ಶೀಲ ವಕೀಲರಿಗೆ ಕೊಡ ಮಾಡುವ ಪ್ರಸ್ತುತ ಸಾಲಿನ “ಬೆಸ್ಟ್ ಪ್ಯಾನಲ್ ಅವಾರ್ಡ್” ಪುರಸ್ಕೃತರಾದ ಎನ್.ಸುಂದರ್ ರಾಜು ಅವರನ್ನು ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಎಸ್. ಮಹೇಶ್ ಜಯನಗರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಪಾಧ್ಯಕ್ಷ ಎಂ.ಎಸ್. ಸುರೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ರವಿಕುಮಾರ್, ಖಜಾಂಚಿ ಎಂ.ಪ್ರಕಾಶ್, ನಿರ್ದೇಶಕರುಗಳಾದ ಚಂದ್ರೇಗೌಡ, ಯೋಗೇಶ್ ಹೆಬ್ಬಾಳ್, ಕುಮಾರ್, ರುದ್ರ ಸ್ವಾಮಿ, ಯೋಗೇಶ್ ಜಯನಗ ರ, ಮೊಹಮದ್ ಜಾಕಿರ್ ಹುಸೇನ್, ರಂಗಕರ್ಮಿ ಜಗದೀಶ್ ಇನ್ನಿತರರು ಉಪಸ್ಥಿತರಿದ್ದರು. ನಿರ್ದೇಶಕ ಚಂದ್ರೇಗೌಡ ಅವರು ಪ್ರಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

8 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

9 hours ago