News Karnataka Kannada
Tuesday, May 07 2024
ಮೈಸೂರು

ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

ಆಗಾಗ್ಗೆ ಕಾಣಿಸಿಕೊಂಡು ಜನ ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆ ಅರಣ್ಯ ಸಿಬ್ಬಂದಿ ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಜಿಲ್ಲೆಯ ರಾಂಪುರ ಹತ್ವಾಳ್ ಗ್ರಾಮದಲ್ಲಿ ನಡೆದಿದ್ದು, ರೈತರು ನೆಮ್ಮದಿಯುಸಿರು ಬಿಟ್ಟಿದ್ದಾರೆ.
Photo Credit : By Author

ಮೈಸೂರು: ಆಗಾಗ್ಗೆ ಕಾಣಿಸಿಕೊಂಡು ಜನ ಜಾನುವಾರುಗಳಿಗೆ ಉಪಟಳ ನೀಡುತ್ತಿದ್ದ ಚಿರತೆ ಅರಣ್ಯ ಸಿಬ್ಬಂದಿ ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಜಿಲ್ಲೆಯ ರಾಂಪುರ ಹತ್ವಾಳ್ ಗ್ರಾಮದಲ್ಲಿ ನಡೆದಿದ್ದು, ರೈತರು ನೆಮ್ಮದಿಯುಸಿರು ಬಿಟ್ಟಿದ್ದಾರೆ.

ಕೆಲವು ದಿನಗಳಿಂದ ಚಿರತೆಯು ರಾಂಪುರ ಹತ್ವಾಳು ಗ್ರಾಮಗಳಲ್ಲಿ ಅಡ್ಡಾಡುತ್ತಿದ್ದುದಲ್ಲದೆ, ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿತ್ತು. ಇದರಿಂದ ಭಯಗೊಂಡ ರೈತರು ಜಾನುವಾರುಗಳನ್ನು ಮೇಯಲು ಬಿಡಲು ಭಯಪಡುವಂತಾಗಿತ್ತು. ಜತೆಗೆ ರೈತರು ಜಮೀನಿಗೆ ತೆರಳಲು ಹಿಂದೇಟು ಹಾಕುತ್ತಿದ್ದರು. ಅಲ್ಲಲ್ಲಿ ಚಿರತೆ ಅಡ್ಡಾಡುತ್ತಾ ಉಪಟಳ ನೀಡುತ್ತಿರುವ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಗ್ರಾಮದ ಚೌಡನಾಯ್ಕ ಎಂಬುವರ ಜಮೀನಲ್ಲಿ ಬೋನಿಟ್ಟು ಚಿರತೆಯ ಸೆರೆ ಕಾರ್ಯಾಚರಣೆ ಆರಂಭಿಸಿದ್ದರು.

ಇದೀಗ ಸೋಮವಾರ ಮುಂಜಾನೆ 3 ಗಂಟೆ ಸಮಯದಲ್ಲಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ.

ಈ ಕುರಿತಂತೆ ಮಾತನಾಡಿರುವ ರೈತರು ಈ ಭಾಗದಲ್ಲಿ ಚಿರತೆಗಳ ಹಾವಳಿ ಜಾಸ್ತಿಯಾಗಿದ್ದು, ಈ ಸ್ಥಳದಲ್ಲಿ ಸೆರೆಸಿಕ್ಕ ಚಿರತೆಗಳ ಪೈಕಿ ಇದು ನಾಲ್ಕನೇ ಚಿರತೆಯಾಗಿದ್ದು ಇನ್ನೂ ಹಲವು ಚಿರತೆಗಳು ಈ ಭಾಗದಲ್ಲಿವೆ. ಇದರಿಂದ ನಾವು ಜಮೀನಿಗೆ ಮತ್ತು ಜಾನುವಾರಗಳನ್ನು ಮೇಯಿಸಲು ಭಯಪಡುವಂತಾಗಿದೆ. ಇನ್ನುಳಿದ ಚಿರತೆಗಳನ್ನು ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು