ರಾಮನಗರ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಬಿಡದಿ ಹೋಬಳಿ ಮಂಚನಾಯ್ಕನಹಳ್ಳಿ ಗ್ರಾಪಂ ಪಿಡಿಒ ಯತೀಶ್ಚಂದ್ರ ಅವರ ಮನೆಗಳು ಮತ್ತು ಕಚೇರಿ ಮೇಲೆ ಬುಧವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಮೈಸೂರಿನ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಏಕಕಾಲಕ್ಕೆ ಕಾರ್ಯಾಚರಣೆಗಿಳಿದ ಐದು ತಂಡಗಳು ಬುಧವಾರ ಮುಂಜಾನೆ ಮಂಚನಾಯ್ಕನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯತೀಶ್ಚಂದ್ರರಿಗೆ ಸೇರಿದ ಮೈಸೂರಿನ ಎರಡು ಮನೆಗಳು, ಅವರ ಸಹುದ್ಯೋಗಿ ಪಿಡಿಒ ಒಬ್ಬರ ಚನ್ನಪಟ್ಟಣದ ಮನೆ, ಬಿಡದಿಯ ಈಗಲ್ಟನ್ ರಸಾರ್ಟ್ ನಲ್ಲಿ ಬಾಡಿಗೆಗೆ ಪಡೆದಿದ್ದ ಮನೆ ಹಾಗೂ ಮಂಚನಾಯ್ಕನಹಳ್ಳಿ ಗ್ರಾಪಂ ಕಾರ್ಯಾಲಯದ ಮೇಲೆ ದಾಳಿ ಮಾಡಿ ಕೆಲವು ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಮೈಸೂರು ಲೋಕಾಯುಕ್ತ ಎಸ್ಪಿ ಸುರೇಶ್ಬಾಬು ಅವರ ಮಾರ್ಗದರ್ಶನದಲ್ಲಿ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ವಾಸ್ತವ್ಯವಿದ್ದ ಬಾಡಿಗೆ ಮನೆ ಮೇಲೆ ಡಿವೈಎಸ್ಪಿ ಕೃಷ್ಣಪ್ಪ ಅವರ ನೇತೃತ್ವದ ತಂಡ. ಮೈಸೂರಿನ ಸಿದ್ಧಾರ್ಥನಗರದ ಮನೆ, ಗುಂಡೂರಾವ್ನಗರ ಹಾಗೂ ಗುರುರಾಜ ಲೇಔಟ್ನಲ್ಲಿರುವ ಮನೆಗಳ ಮೇಲೆ ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ರೂಪಶ್ರೀ ಮತ್ತು ಲೋಕೇಶ್ ಅವರುಗಳ ತಂಡ. ಚನ್ನಪಟ್ಟಣ ಟೌನ್ ಕುವೆಂಪುನಗರದ ೩ನೇ ಕ್ರಾಸ್ ನಲ್ಲಿರುವ ಸಹುದ್ಯೋಗಿ ಮಹಿಳಾ ಪಿಡಿಒ ಒಬ್ಬರ ಮನೆಯ ಮೇಲೆ ಇನ್ಸ್ಪೆಕ್ಟರ್ ಜಯರತ್ನ ನೇತೃತ್ವದ ತಂಡ ಹಾಗೂ ಗ್ರಾಪಂ ಕಾರ್ಯಾಲಯದಲ್ಲಿ ಇನ್ಸ್ಪೆಕ್ಟರ್ ರವಿಕುಮಾರ್ ನೇತೃತ್ವದ ಪೊಲೀಸರ ತಂಡಗಳು ದಾಳಿ ನಡೆಸಿದರು.
ದಾಳಿಯ ವೇಳೆ ನಗದು ಸೇರಿದಂತೆ ಚಿನ್ನಾಭರಣ ಹಾಗೂ ನಿವೇಶನ ಮತ್ತು ಮನೆಗಳ ದಾಖಲೆಗಳು ಲಭ್ಯವಾಗಿವೆ ಎಂದು ಹೇಳಲಾಗಿದೆ.
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…